ಹಿಂದೂಗಳ ಹಬ್ಬ, ಮೆರವಣಿಗೆ ನಿಷೇಧಿಸಿ;ಮುಸ್ಲಿಮರ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಇದನ್ನು ಮುಸ್ಲಿಮರು ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

Team Udayavani, May 14, 2021, 10:37 AM IST

madras-high-court-warns-against-religious-intolerance-after-muslims-object-to-conduct-of-hindu-festival

ಚೆನ್ನೈ: ಒಂದು ವೇಳೆ ಧಾರ್ಮಿಕ ಅಸಹಿಷ್ಣುತೆಗೆ ಅನುಮತಿ ನೀಡಿದರೆ, ಅದು ಜಾತ್ಯತೀತ ದೇಶಕ್ಕೆ ಒಳ್ಳೆಯದಲ್ಲ. ಯಾವುದೇ ಧಾರ್ಮಿಕ ಗುಂಪಿನ ಹಬ್ಬದ ಆಚರಣೆ, ಮೆರವಣಿಗೆಗೆ ಸಂಬಂಧಿಸಿದ ಅಸಹಿಷ್ಣುತೆಗೆ ಅವಕಾಶ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಪೀಠ ಇತ್ತೀಚೆಗೆ ಅಭಿಪ್ರಾಯವ್ಯಕ್ತಪಡಿಸಿದೆ.

ಇದನ್ನೂ ಓದಿ:ಅಮೆರಿಕಾದಲ್ಲಿ ಸಂಪೂರ್ಣ ಕೋವಿಡ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ : ಸಿಡಿಸಿ

ಭಾರತ ಜಾತ್ಯತೀತ ದೇಶವಾಗಿದ್ದು, ಬಹುಸಂಖ್ಯಾತ ಧಾರ್ಮಿಕ ಗುಂಪಿನ ಹಬ್ಬ, ಮೆರವಣಿಗಳನ್ನು ನಡೆಸುವ ಮೂಲಭೂತ ಹಕ್ಕನ್ನು ತಡೆಯಲು ಇತರ ಸಮುದಾಯಕ್ಕೆ ಕಾನೂನಿನ ಸಹಮತ ಇಲ್ಲ ಎಂದು ಪೀಠ ಹೇಳಿದೆ.

ಹಿಂದೂಗಳ ಹಬ್ಬ, ಧಾರ್ಮಿಕ ಮೆರವಣಿಗೆ ನಡೆಸುವುದಕ್ಕೆ ತಡೆ ನೀಡಬೇಕೆಂಬ ಹಿಂದು-ಮುಸ್ಲಿಂ ನಿವಾಸಿಗಳ ದೀರ್ಘಕಾಲದ ವಿವಾದದ ಕುರಿತು ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಪೀಠದ ಜಸ್ಟೀಸ್ ಎನ್ ಕಿರುಬಾಕರನ್ ಮತ್ತು ಜಸ್ಟೀಸ್ ಪಿ.ವೇಲುಮುರುಗನ್ ತಿಳಿಸಿದ್ದಾರೆ.

ಭಾರತ ಜಾತ್ಯತೀತ ದೇಶವಾಗಿದೆ ಅಲ್ಲದೇ ಕೇವಲ ಒಂದು ಧಾರ್ಮಿಕ ಗುಂಪು ಒಂದು ನಿರ್ದಿಷ್ಟ ಪ್ರದೇಶದಲ್ಲಿ ಬಹುಸಂಖ್ಯೆಯಲ್ಲಿ ವಾಸಿಸುತ್ತಿರುವಾಗ, ಆ ಪ್ರದೇಶದಲ್ಲಿ ಇತರ ಧಾರ್ಮಿಕ ಹಬ್ಬಗಳು ಅಥವಾ ಮೆರವಣಿಗಗಳನ್ನು ನಡೆಸಲು ಅನುಮತಿ ನೀಡಬಾರದು ಎಂಬುದು ಸಮಂಜಸವಲ್ಲ ಎಂದು ಪೀಠ ಹೇಳಿದೆ.

ಏನಿದು ವಿವಾದ:
1951ರಿಂದಲೂ ಎರಡು ಧಾರ್ಮಿಕ ಗುಂಪುಗಳ ನಡುವೆ ಶೇ.96ರಷ್ಟು ಸರ್ಕಾರಿ ಪರಂಬೋಕು ಜಾಗದ ವಿಚಾರದಲ್ಲಿ ವಿವಾದ ನಡೆಯುತ್ತಲೇ ಇತ್ತು. ಆದರೆ ಮುಸ್ಲಿಮರು ಈ ಜಾಗವನ್ನು ಸಾಮಾನ್ಯ ಸ್ಥಳವಾಗಿ ಬಳಸಬೇಕೆಂದು ವಾದಿಸಿದ್ದರೆ, ಹಿಂದುಗಳು ನಾವು ದೀರ್ಘಕಾಲದಿಂದ ಪರಂಬೋಕು ಸ್ಥಳವನ್ನು ಬಳಸುತ್ತಿದ್ದು, ಇದನ್ನು ಸಾಮಾನ್ಯ ಸ್ಥಳವಾಗಿ ಬಳಸಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದರು. ಈ ವಿವಾದದ ಹಿನ್ನೆಲೆಯಲ್ಲಿ ಹಲವಾರು ಬಾರಿ ಘರ್ಷಣೆ, ಗಲಾಟೆ ನಡೆದು ಹಿಂದೂ, ಮುಸ್ಲಿಮರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

2011ರವರೆಗೂ ಈ ಸ್ಥಳದಲ್ಲಿ ಮೂರು ದೇವಸ್ಥಾನಗಳ ಹಬ್ಬ, ಹರಿದಿನಗಳನ್ನು ಶಾಂತಿಯುತವಾಗಿ ನಡೆಸಿದ್ದರು. 2012ರ ನಂತರ ಹಿಂದೂಗಳ ಹಬ್ಬವನ್ನು ಆಚರಿಸಲು ಮುಸ್ಲಿಮರು ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದರು. ಇದು ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದ್ದು, ಹಿಂದೂಗಳ ಹಬ್ಬದ ಆಚರಣೆಗೆ ಇಲ್ಲ ಎಂಬುದಾಗಿ ಪ್ರತಿಪಾದಿಸಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

ಮುಸ್ಲಿಂ ಸಂಘಟನೆಯ ಆಕ್ಷೇಪ, ಕೋರ್ಟ್ ಕಟಕಟೆಗೆ ಏರಿದ ಪರಿಣಾಮ 2012 ಮತ್ತು 2015ರಲ್ಲಿ ಕೋರ್ಟ್ ವಿವಿಧ ನಿರ್ಬಂಧಗಳ ಆದೇಶದ ಮೂಲಕ ಹಿಂದೂಗಳ ಹಬ್ಬವನ್ನು ಆಚರಿಸಲು ಅನುಮತಿ ನೀಡಿತ್ತು.

2018ರಲ್ಲಿ ಕಂದಾಯ ಇಲಾಖೆಯ ಅಧಿಕಾರಿ, ಈ ಸ್ಥಳದಲ್ಲಿ ಹಿಂದೂಗಳು ಹಬ್ಬವನ್ನು ಆಚರಿಸುವಂತೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದ್ದರು. ಆದರೆ ಇದನ್ನು ಮುಸ್ಲಿಮರು ಮದ್ರಾಸ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ ಕೂಡಾ ಕೆಲವೊಂದು ಷರತ್ತುಗಳನ್ನು ವಿಧಿಸಿ ಹಬ್ಬಗಳನ್ನು ಆಚರಿಸಲು ಅನುಮತಿ ನೀಡಿತ್ತು. ನಂತರ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ದೀರ್ಘಕಾಲದವರೆಗೂ ಮುಂದುವರಿದಿದ್ದು, ಹೈಕೋರ್ಟ್ ಪೀಠ ಸ್ಥಳಕ್ಕೆ ಸಂಬಂಧಿಸಿದಂತೆ ಈ ಮಹತ್ವದ ಆದೇಶವನ್ನು ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.