Tamil Nadu: ಸೆಂಥಿಲ್ ಬಾಲಾಜಿ ಪ್ರಕರಣಕ್ಕೆ ಮದ್ರಾಸ್ ಹೈಕೋರ್ಟ್ ನಲ್ಲಿ ಭಿನ್ನ ತೀರ್ಪು
Team Udayavani, Jul 4, 2023, 1:25 PM IST
ಚೆನ್ನೈ: ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ಭಿನ್ನ ತೀರ್ಪು ನೀಡಿದೆ. ಸಚಿವರ ಪತ್ನಿ ಮೇಗಲಾ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಈಗ ವಿಸ್ತೃತ ಪೀಠಕ್ಕೆ ಉಲ್ಲೇಖಿಸಲಾಗಿದೆ.
ಜಾರಿ ನಿರ್ದೇಶನಾಲಯದಿಂದ ಸಚಿವರನ್ನು ಬಂಧಿಸಿರುವುದು ಕಾನೂನುಬಾಹಿರ ಎಂದು ಸಚಿವರ ಪತ್ನಿ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ಭಾರಿ ಮಳೆಗೆ ಧರೆಗುರುಳಿದ ಮರ… 2 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್
ನ್ಯಾಯಮೂರ್ತಿ ಜೆ.ನಿಶಾ ಬಾನು ಅವರು ಸಚಿವರ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಿ ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರೆ, ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಅವರು ವಿಭಾಗೀಯ ಪೀಠದಲ್ಲಿ ಹಿರಿಯ ನ್ಯಾಯಾಧೀಶರು ತೆಗೆದುಕೊಂಡ ಅಭಿಪ್ರಾಯಕ್ಕೆ ಭಿನ್ನರಾದರು. ಆದ್ದರಿಂದ ಇದೀಗ ಮೂರನೇ ನ್ಯಾಯಾಧೀಶ ಮುಖ್ಯ ನ್ಯಾಯಮೂರ್ತಿ ಎಸ್.ವಿ. ಗಂಗಾಪುರವಾಲಾ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ಸಚಿವರ ಪತ್ನಿಯು, ಬಂಧನವನ್ನು ಪ್ರಶ್ನಿಸಿದ್ದಾರೆ, ಬಂಧನದ ಸಮಯದಲ್ಲಿ ಇಡಿ ಕಾರ್ಯವಿಧಾನಗಳನ್ನು ಅನುಸರಿಸಲು ವಿಫಲವಾಗಿದೆ. ಆದ್ದರಿಂದ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಮತ್ತು ಅವರ ಪತಿಗೆ ಸ್ವಾತಂತ್ರ್ಯ ನೀಡಬೇಕು ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ