ಮಹಾರಾಷ್ಟ್ರ: ವಿವಾದಕ್ಕೆ ಗುರಿಯಾದ ಪೊಲೀಸರ ಉಗ್ರ ವಿರೋಧಿ ಅಣಕು ಡ್ರಿಲ್
Team Udayavani, Jan 22, 2023, 6:21 PM IST
ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರದ ದೇವಸ್ಥಾನವೊಂದರಲ್ಲಿ ಭಯೋತ್ಪಾದಕರಂತೆ ಪೋಸು ಕೊಡುತ್ತಿದ್ದ ಸಿಬಂದಿ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದ ನಂತರ ಪೊಲೀಸರ ಅಣಕು ಡ್ರಿಲ್ ವಿವಾದಕ್ಕೆ ಸಿಲುಕಿತು.
ಈ ಕುರಿತು ವಕೀಲರ ಗುಂಪು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇಂತಹ ತಪ್ಪು ಮರುಕಳಿಸದಂತೆ ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರಸಿಂಗ್ ಪರದೇಶಿ ಭಾನುವಾರ ಹೇಳಿದ್ದಾರೆ.
ಇಲ್ಲಿನ ಹೆಸರಾಂತ ಮಹಾಕಾಳಿ ದೇವಸ್ಥಾನದಲ್ಲಿ ಜನವರಿ 11 ರಂದು ನಡೆಸಲಾದ ಅಣಕು ಡ್ರಿಲ್ನಲ್ಲಿ ಭಯೋತ್ಪಾದಕರ ಗುಂಪೊಂದು ಪೂಜಾ ಸ್ಥಳವನ್ನು ವಶಪಡಿಸಿಕೊಂಡು ಭಕ್ತರನ್ನು ಒತ್ತೆಯಾಳಾಗಿ ಇರಿಸುವ ದೃಶ್ಯವನ್ನು ಭದ್ರತಾ ಪಡೆಗಳಿಂದ ಮಾಡಲಾಯಿತು. “ಅಣಕು ಡ್ರಿಲ್ನಲ್ಲಿ ಭಯೋತ್ಪಾದಕರ ಪಾತ್ರವನ್ನು ನಿರ್ವಹಿಸಿದ ಸಿಬಂದಿ ನಿರ್ದಿಷ್ಟ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸುವ ಡ್ರಿಲ್ನ ವಿಡಿಯೋಗಳು ಒಂದು ಸಮುದಾಯವನ್ನು ನಕಾರಾತ್ಮಕವಾಗಿ ಚಿತ್ರಿಸುತ್ತದೆ ಮತ್ತು ಎಲ್ಲಾ ಭಯೋತ್ಪಾದಕರು ಈ ಸಮುದಾಯದಿಂದ ಬಂದವರು ಎಂದು ನಂಬುವಂತೆ ಮಾಡುತ್ತದೆ ”ಎಂದು ಇಲ್ಲಿನ ವಕೀಲರ ಗುಂಪಿನ ಫರತ್ ಬೇಗ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ