MES ಪರ ಬೆಳಗಾವಿಯಲ್ಲಿ ಶಿಂಧೆ, ಫಡ್ನವೀಸ್ ಪ್ರಚಾರ ಮಾಡಲಿ: ರಾವುತ್ ಸವಾಲು
Team Udayavani, Apr 30, 2023, 3:14 PM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಫಡ್ನವೀಸ್ ಅವರು ಬೆಳಗಾವಿಗೆ ತೆರಳಿ ಎಂಇಎಸ್ ಪರ ಪ್ರಚಾರ ಮಾಡಬೇಕು ಎಂದು ಮಾಜಿ ಸಚಿವ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ “ನಾನು ಮಹಾರಾಷ್ಟ್ರ ಏಕೀಕರಣ ಸಮಿತಿ ಪರ ಮತ ಕೇಳಲು ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳಿಗೆ ಹೋಗುತ್ತಿದ್ದೇನೆ. ಉಪಮುಖ್ಯಮಂತ್ರಿ ಫಡ್ನವೀಸ್ ಬೆಳಗಾವಿಗೆ ತೆರಳಿ ಎಂಇಎಸ್ ಪರ ಪ್ರಚಾರ ಮಾಡಬೇಕು. ಆದರೆ, ಪರಿಸ್ಥಿತಿ ವಿಭಿನ್ನವಾಗಿದೆ, ಎಂಇಎಸ್ ಸೋಲಿಸಲು ಅವರು ಬೆಳಗಾವಿಗೆ ಹೋಗಿದ್ದಾರೆ. ಬಿಜೆಪಿ ಮರಾಠಿ ಜನರನ್ನು ಸೋಲಿಸಲು ಹೋಗಿದ್ದಕ್ಕಾಗಿ ನಾಚಿಕೆಪಡಬೇಕು ” ಎಂದು ರಾವುತ್ ಹೇಳಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ಆಂದೋಲನದಲ್ಲಿ ತಾನು ಭಾಗವಹಿಸಿದ್ದೇನೆ ಎಂದು ಸಿಎಂ ಶಿಂಧೆ ಹೇಳಿಕೊಳ್ಳುತ್ತಾರೆ, ಅವರು ನಿಜವಾಗಿಯೂ ಹಾಗೆ ಮಾಡಿದ್ದರೆ ಅವರು ಎಂಇಎಸ್ ಮತ್ತು ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬೆಳಗಾವಿಯಲ್ಲಿರಬೇಕು ಎಂದರು.
ಕಳೆದ ವರ್ಷ ಜೂನ್ನಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿಂಧೆ ಅವರ ಶಿವಸೇನೆ ಆಡಳಿತ ಮಿತ್ರಪಕ್ಷಗಳಾಗಿವೆ. ಬೆಳಗಾವಿ-ಕಾರವಾರದ ಮರಾಠಿ ಮಾತನಾಡುವ ಜನರಿಗೆ ಶಿವಸೇನೆ (ಯುಬಿಟಿ) ಬದ್ಧವಾಗಿದೆ. ಶಿವಸೇನೆಯ 69 ಕಾರ್ಯಕರ್ತರು ಹುತಾತ್ಮರಾಗಿದ್ದಾರೆ. ಪಕ್ಷದ ಸಂಸ್ಥಾಪಕ ಬಾಳ್ ಠಾಕ್ರೆ ಅವರನ್ನು ಗಡಿ ವಿವಾದದಲ್ಲಿ ಮೂರು ತಿಂಗಳ ಕಾಲ ಜೈಲಿನಲ್ಲಿರಿಸಲಾಗಿತ್ತು ಎಂದು ರಾಜ್ಯಸಭಾ ಸಂಸದ ರಾವುತ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!