
ಸಂಪುಟ ಸದಸ್ಯರ ಸಮೇತ ಸಿಎಂ ಶಿಂಧೆ ಕಾಮಾಖ್ಯ ದೇವಿಯ ದರ್ಶನ
ಅಧಿಕಾರ ಸ್ವೀಕಾರಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದ್ದರು..
Team Udayavani, Nov 26, 2022, 4:59 PM IST

ಗುವಾಹಟಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಹಲವಾರು ಸಚಿವರು ಮತ್ತು ತಮ್ಮ ಕುಟುಂಬಗಳೊಂದಿಗೆ ಶನಿವಾರ ಗುವಾಹಟಿಗೆ ಭೇಟಿ ನೀಡಿ ಕಾಮಾಖ್ಯ ದೇವಿಯ ದರ್ಶನ ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (MVA) ಸರಕಾರವನ್ನು ಉರುಳಿಸುವ ಮೊದಲು ಜೂನ್ 22-29 ರಿಂದ ಒಂದು ವಾರದವರೆಗೆ ಶಿವಸೇನೆಯ ಶಾಸಕರು ಮತ್ತು ಸ್ವತಂತ್ರ ಶಾಸಕರ ಗುಂಪಿನೊಂದಿಗೆ ಶಿಂಧೆ ಗುವಾಹಟಿಯ ಹೋಟೆಲ್ನಲ್ಲಿ ತಂಗಿದ್ದ ಐದು ತಿಂಗಳ ನಂತರ ಈಶಾನ್ಯ ರಾಜ್ಯಕ್ಕೆ ಕಿರು ಪ್ರವಾಸ ಕೈಗೊಂಡಿದ್ದಾರೆ.
“ಮಹಾರಾಷ್ಟ್ರದ ಮುಖ್ಯಮಂತ್ರಿ ಶಿಂಧೆ , ಹಲವಾರು ಸಚಿವರು, ಶಾಸಕರು ಮತ್ತು ಅವರ ಕುಟುಂಬ ಸದಸ್ಯರು ಚಾರ್ಟರ್ಡ್ ಸೇರಿದಂತೆ ಪ್ರತ್ಯೇಕ ವಿಮಾನಗಳಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.ವಿಮಾನ ನಿಲ್ದಾಣದಲ್ಲಿ ಅಸ್ಸಾಂನ ಮೂವರು ಸಚಿವರು ಮತ್ತು ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ನಮಗೆ ತಿಳಿದಿರುವಂತೆ, ಅವರು ಕಾಮಾಖ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಬಂದಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ರಾತ್ರಿ ಕಳೆದು ನಾಳೆ ವಾಪಸಾಗಲಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ನಲ್ಲಿ ಇದೇ ಹೋಟೆಲ್ನಲ್ಲಿ ಬಂಡಾಯವೆದ್ದಿದ್ದ ಶಾಸಕರು ತಂಗಿದ್ದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.
”ಜೂನ್ನಲ್ಲಿ ಆಗಿನ ಬಂಡಾಯ ಶಾಸಕರು ಕಾಮಾಖ್ಯ ದೇವಿಯ ದರ್ಶನ ಪಡೆದು ಯಶಸ್ಸಿಗಾಗಿ ಪ್ರಾರ್ಥಿಸಿದ್ದರು. ದೇವಿಯು ನಮ್ಮ ಪ್ರಾರ್ಥನೆಯನ್ನು ಕೇಳಿದಳು ಮತ್ತು ಶಿಂಧೆ ಜಿ ಮುಖ್ಯಮಂತ್ರಿಯಾದರು”ಎಂದು ಶಾಸಕರೊಬ್ಬರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಶಿಂಧೆ ಅವರು ಜೂನ್ 22 ರಂದು ಭಿನ್ನಮತೀಯ ಶಿವಸೇನೆ ಶಾಸಕರು ಮತ್ತು ಕೆಲವು ಸ್ವತಂತ್ರ ಶಾಸಕರೊಂದಿಗೆ ಮುಂಬೈನಿಂದ ಸುಮಾರು 2,700 ಕಿಮೀ ದೂರದಲ್ಲಿರುವ ಗುವಾಹಟಿಯನ್ನು ತಲುಪಿದ್ದರು.ಜೂನ್ 29 ರವರೆಗೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಅವರು ಗೋವಾಕ್ಕೆ ತೆರಳಿ ನಂತರ ಮುಂಬೈಗೆ ತೆರಳಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ 25 ಸಾವಿರಕ್ಕೂ ಅಧಿಕ ಭಕ್ತರ ದಂಡು

ಸಮಾಜದಲ್ಲಿ ತುಳಿತಕ್ಕೆ ಒಳಗಾದ ಪ್ರತಿ ವರ್ಗದ ಅಭಿವೃದ್ಧಿಗೆ ಬದ್ಧ: ಮೋದಿ

ಬಸ್ ಚಾಲಕನ ವೇಗಕ್ಕೆ ಕಳಚಿ ಹೋದ ಚಕ್ರ: ಅಪಾಯದಿಂದ ಪಾರಾದ ಪ್ರಯಾಣಿಕರು

ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

ಅಂಬೇಡ್ಕರ್ ಪ್ರತಿಮೆ ಭಗ್ನ: ಪೊಲೀಸರಿಂದ ವ್ಯಕ್ತಿ ಬಂಧನ