ಸಂಪುಟ ಸದಸ್ಯರ ಸಮೇತ ಸಿಎಂ ಶಿಂಧೆ ಕಾಮಾಖ್ಯ ದೇವಿಯ ದರ್ಶನ
ಅಧಿಕಾರ ಸ್ವೀಕಾರಕ್ಕೂ ಮುನ್ನ ಪ್ರಾರ್ಥನೆ ಸಲ್ಲಿಸಿದ್ದರು..
Team Udayavani, Nov 26, 2022, 4:59 PM IST
ಗುವಾಹಟಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಹಲವಾರು ಸಚಿವರು ಮತ್ತು ತಮ್ಮ ಕುಟುಂಬಗಳೊಂದಿಗೆ ಶನಿವಾರ ಗುವಾಹಟಿಗೆ ಭೇಟಿ ನೀಡಿ ಕಾಮಾಖ್ಯ ದೇವಿಯ ದರ್ಶನ ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (MVA) ಸರಕಾರವನ್ನು ಉರುಳಿಸುವ ಮೊದಲು ಜೂನ್ 22-29 ರಿಂದ ಒಂದು ವಾರದವರೆಗೆ ಶಿವಸೇನೆಯ ಶಾಸಕರು ಮತ್ತು ಸ್ವತಂತ್ರ ಶಾಸಕರ ಗುಂಪಿನೊಂದಿಗೆ ಶಿಂಧೆ ಗುವಾಹಟಿಯ ಹೋಟೆಲ್ನಲ್ಲಿ ತಂಗಿದ್ದ ಐದು ತಿಂಗಳ ನಂತರ ಈಶಾನ್ಯ ರಾಜ್ಯಕ್ಕೆ ಕಿರು ಪ್ರವಾಸ ಕೈಗೊಂಡಿದ್ದಾರೆ.
“ಮಹಾರಾಷ್ಟ್ರದ ಮುಖ್ಯಮಂತ್ರಿ ಶಿಂಧೆ , ಹಲವಾರು ಸಚಿವರು, ಶಾಸಕರು ಮತ್ತು ಅವರ ಕುಟುಂಬ ಸದಸ್ಯರು ಚಾರ್ಟರ್ಡ್ ಸೇರಿದಂತೆ ಪ್ರತ್ಯೇಕ ವಿಮಾನಗಳಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.ವಿಮಾನ ನಿಲ್ದಾಣದಲ್ಲಿ ಅಸ್ಸಾಂನ ಮೂವರು ಸಚಿವರು ಮತ್ತು ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ನಮಗೆ ತಿಳಿದಿರುವಂತೆ, ಅವರು ಕಾಮಾಖ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಬಂದಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ರಾತ್ರಿ ಕಳೆದು ನಾಳೆ ವಾಪಸಾಗಲಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ನಲ್ಲಿ ಇದೇ ಹೋಟೆಲ್ನಲ್ಲಿ ಬಂಡಾಯವೆದ್ದಿದ್ದ ಶಾಸಕರು ತಂಗಿದ್ದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಶಿಂಧೆ ಹೇಳಿದ್ದಾರೆ.
”ಜೂನ್ನಲ್ಲಿ ಆಗಿನ ಬಂಡಾಯ ಶಾಸಕರು ಕಾಮಾಖ್ಯ ದೇವಿಯ ದರ್ಶನ ಪಡೆದು ಯಶಸ್ಸಿಗಾಗಿ ಪ್ರಾರ್ಥಿಸಿದ್ದರು. ದೇವಿಯು ನಮ್ಮ ಪ್ರಾರ್ಥನೆಯನ್ನು ಕೇಳಿದಳು ಮತ್ತು ಶಿಂಧೆ ಜಿ ಮುಖ್ಯಮಂತ್ರಿಯಾದರು”ಎಂದು ಶಾಸಕರೊಬ್ಬರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಶಿಂಧೆ ಅವರು ಜೂನ್ 22 ರಂದು ಭಿನ್ನಮತೀಯ ಶಿವಸೇನೆ ಶಾಸಕರು ಮತ್ತು ಕೆಲವು ಸ್ವತಂತ್ರ ಶಾಸಕರೊಂದಿಗೆ ಮುಂಬೈನಿಂದ ಸುಮಾರು 2,700 ಕಿಮೀ ದೂರದಲ್ಲಿರುವ ಗುವಾಹಟಿಯನ್ನು ತಲುಪಿದ್ದರು.ಜೂನ್ 29 ರವರೆಗೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಅವರು ಗೋವಾಕ್ಕೆ ತೆರಳಿ ನಂತರ ಮುಂಬೈಗೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ