ಗಡಿ ವಿವಾದ; ಕರ್ನಾಟಕಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿ ನಿರ್ಣಯ: ಮಹಾರಾಷ್ಟ್ರ ಸಚಿವ
ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರ್ಧರಿಸಿದ್ದನ್ನು ಗೌರವಿಸಲಿಲ್ಲ.....ಕೇಂದ್ರ ಗೃಹ ಸಚಿವರಿಗೆ ತಿಳಿಸುತ್ತೇವೆ..!
Team Udayavani, Dec 23, 2022, 3:03 PM IST
ಮುಂಬಯಿ : ಕರ್ನಾಟಕದೊಂದಿಗೆ ಗಡಿ ವಿವಾದದ ಕುರಿತು ಕರ್ನಾಟಕವುವು ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾದ ನಿರ್ಣಯವನ್ನು ಮುಂದಿನ ವಾರ ನಮ್ಮ ರಾಜ್ಯ ಸರಕಾರವು ತರಲಿದೆ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜ್ ದೇಸಾಯಿ ಶುಕ್ರವಾರ ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ನಾಗ್ಪುರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ದೇಸಾಯಿ, ”ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಕುರಿತು ರಾಜ್ಯ ಸರಕಾರ ವಿಸ್ತೃತ ನಿರ್ಣಯವನ್ನು ತರಲಿದ್ದು, ಇದು ಕರ್ನಾಟಕ ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿರಲಿದೆ. ಸೋಮವಾರ ವಿಧಾನಮಂಡಲದಲ್ಲಿ ಅಂಗೀಕಾರವಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಮಹಾರಾಷ್ಟ್ರ ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಸಭೆಯ ನಂತರವೂ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರ್ಧರಿಸಿದ್ದನ್ನು ಗೌರವಿಸಲಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಬ್ಬರೂ ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತಾರೆ, ”ಎಂದು ಸಚಿವ ದೇಸಾಯಿ ಹೇಳಿದರು.
ರಾಜ್ಯವು ನೇಮಿಸಿದ ಮಹಾರಾಷ್ಟ್ರ-ಕರ್ನಾಟಕ ಗಡಿ ಸಮನ್ವಯ ಸಮಿತಿಯ ಸದಸ್ಯರಾಗಿರುವ ದೇಸಾಯಿ, ಸೋಮವಾರ ಅಂಗೀಕರಿಸುವ ನಿರ್ಣಯವು ಮಹಾರಾಷ್ಟ್ರದ ಪರವಾಗಿ ಹೆಚ್ಚು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಲಾಗುತ್ತದೆ ಮತ್ತು ಮರಾಠಿ ಜನರ ಹಿತಾಸಕ್ತಿಯಾಗಿದೆ ಎಂದರು.
ನಿರ್ಣಯವನ್ನು ಅಂಗೀಕರಿಸಿದ ನಂತರ, ಮಹಾರಾಷ್ಟ್ರದ ನಾಯಕರನ್ನು ಕರ್ನಾಟಕಕ್ಕೆ ಪ್ರವೇಶಿಸದಂತೆ ತಡೆದಿರುವ ಬಗ್ಗೆ ನಮ್ಮ ತೀವ್ರ ಅಸಮಾಧಾನವನ್ನು ನಾವು ಕೇಂದ್ರ ಗೃಹ ಸಚಿವರಿಗೆ ತಿಳಿಸುತ್ತೇವೆ ಎಂದು ಹೇಳಿದರು.
ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಕುರಿತು ಗುರುವಾರ ಕರ್ನಾಟಕ ವಿಧಾನಸಭೆಯು ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ನೆರೆಯವರಿಗೆ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡಬಾರದು ಎಂದು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಮಹಾರಾಷ್ಟ್ರವು ರಚಿಸಿದ ಗಡಿ ವಿವಾದವನ್ನು ಖಂಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್