ಮಹದಾಯಿ ವಿವಾದ ಇತ್ಯರ್ಥ ಶಾ ಬಗೆಹರಿಸ್ತಾರೆ
Team Udayavani, Mar 5, 2018, 6:25 AM IST
ಪಣಜಿ: ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ಕಗ್ಗಂಟಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಗೆಹರಿಸಲಿದ್ದಾರೆ ಎಂಬ ಆಶಾಭಾವನೆಯನ್ನು ಗೋವಾ ಬಿಜೆಪಿ ಘಟಕ ವ್ಯಕ್ತಪಡಿಸಿದೆ.
ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಪಕ್ಷದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಆದಷ್ಟು ಬೇಗ ಬಗೆಹರಿಸುತ್ತೇವೆಂದು ಭರವಸೆ ನೀಡಿದ್ದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೋವಾ ಬಿಜೆಪಿ ಘಟಕದ ಅಧ್ಯಕ್ಷ ವಿನಯ್ ತೆಂಡುಲ್ಕರ್, ಎರಡೂ ರಾಜ್ಯಗಳ ನಡುವಿನ ನದಿ ನೀರು ಹಂಚಿಕೆ ವಿವಾದವನ್ನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬೇಗನೆ ಬಗೆಹರಿಸುತ್ತಾರೆಂಬ ಪೂರ್ಣ ನಂಬಿಕೆಯಿದೆ. ಅಲ್ಲದೆ, ನ್ಯಾಯಾಧಿಕರಣದಲ್ಲೂ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ನಂಬಿಕೆಯೂ ಇದೆ. ಇದಕ್ಕಾಗಿ ನಾವು ನ್ಯಾಯಾಧಿಕರಣದ ಆದೇಶವನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.