ಮಹಾದಾಯಿ: ರಾಜ್ಯಕ್ಕೆ ಭಾಗಶಃ ಜಯ: ಕರ್ನಾಟಕಕ್ಕೆ 13.4 ಟಿಎಂಸಿ ನೀರು
Team Udayavani, Aug 15, 2018, 10:45 AM IST
ಹೊಸದಿಲ್ಲಿ: ಕರ್ನಾಟಕ ಮತ್ತು ಗೋವಾ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ತೀರ್ಪು ಪ್ರಕಟಿಸಿದ್ದು, ತನ್ನ ಪಾಲಿನ ನೀರು ಪಡೆಯುವಲ್ಲಿ ಕರ್ನಾಟಕ ಭಾಗಶಃ ಯಶಸ್ವಿಯಾಗಿದೆ. ಮೂರೂ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿರುವ ನ್ಯಾಯಮಂಡಳಿ ಕರ್ನಾಟಕಕ್ಕೆ 13.42 ಟಿಎಂಸಿ, ಗೋವಾಕ್ಕೆ 24 ಟಿಎಂಸಿ, ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರು ನೀಡಿದೆ. ಜತೆಗೆ ಮಹಾದಾಯಿ ನದಿ ನೀರನ್ನು ಮಲಪ್ರಭಾ ಕಡೆ ತಿರುಗಿಸಲು ಕೂಡ ನ್ಯಾಯಮಂಡಳಿ ಅನು ಮತಿ ನೀಡಿದ್ದು, ಇದರಿಂದ ಕರ್ನಾಟಕಕ್ಕೆ ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ದಲ್ಲದೆ, ಕಳಸಾ- ಬಂಡೂರಿ ನಾಲಾ ಯೋಜನೆಗೆ ಇನ್ನಿಲ್ಲದಂತೆ ಕಾಡಿದ ಗೋವಾಕ್ಕೆ ಭಾರೀ ಹಿನ್ನಡೆಯಾಗಿದೆ. ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾ| ಜೆ.ಎಂ. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಸಮಗ್ರ ತೀರ್ಪನ್ನು 12 ಸಂಪುಟಗಳಲ್ಲಿ ಕೇಂದ್ರ ಸರಕಾರಕ್ಕೆ ಸಲ್ಲಿಕೆ ಮಾಡಿದೆ.
ಮಹಾದಾಯಿ ನದಿಯಲ್ಲಿ ಶೇ. 75ರ ಅವಲಂಬನೆ ಆಧಾರದಲ್ಲಿ 188 ಟಿಎಂಸಿ ನೀರು ಲಭ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮಂಡಳಿ ಈ ಪೈಕಿ ಮೂರು ರಾಜ್ಯಗಳಿಗೆ ಒಟ್ಟಾರೆ 38.72 ಟಿಎಂಸಿ ನೀರು ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಧನಾತ್ಮಕ ಅಂಶವೆಂದರೆ, ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗೆ ನೀರು ವಿಂಗಡಣೆ ಮಾಡಿ ನೀರು ತಿರುಗಿಸಲು ಅನುಮತಿ ನೀಡಿರುವುದು ಮತ್ತು ಮಹಾದಾಯಿ ನೀರಿನಿಂದ ಜಲವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ಕೊಟ್ಟಿರುವುದು. ಈ ತೀರ್ಪಿನ ಬಗ್ಗೆ ಆಕ್ಷೇಪಗಳಿದ್ದರೆ ಅದನ್ನು ಸಂಬಂಧಿಸಿದ ನ್ಯಾಯಾಂಗದ ಮುಂದೆ ಪ್ರಶ್ನಿಸಲು ಅವಕಾಶವಿದೆ ಎಂದೂ ತೀರ್ಪಿನಲ್ಲಿ ಹೇಳಿದೆ.
ಪ್ರಾಧಿಕಾರ ರಚನೆಗೆ ಸೂಚನೆ
ಮಹಾದಾಯಿ ನದಿ ನೀರು ಹಂಚಿಕೆ ಮತ್ತು ಅದಕ್ಕೆ ಸಂಬಂಧಿಸಿದ ಯೋಜನೆಗಳ ಜಾರಿಗಾಗಿ ಮಹಾದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕು ಎಂದು ನ್ಯಾಯಮಂಡಳಿ ಸೂಚಿಸಿದೆ. ಅಲ್ಲದೆ, ಈ ತೀರ್ಪು 2048ರ ಆಗಸ್ಟ್ 31ರವರೆಗೆ ಜಾರಿಯಲ್ಲಿರುತ್ತದೆ. ಅನಂತರ ಅದರಲ್ಲಿ ಬದಲಾವಣೆ ಮಾಡಬಹುದು.
ತೀರ್ಪು ಜಾರಿ ಯಾವತ್ತಿನಿಂದ?
ನ್ಯಾಯಮಂಡಳಿಯ ತೀರ್ಪಿನ ಬಗ್ಗೆ ಕೇಂದ್ರ ಸರಕಾರ ಅಂತಾರಾಜ್ಯ ನದಿ ವಿವಾದ ಕಾಯ್ದೆಯನ್ವಯ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ಬಳಿಕ ತೀರ್ಪು ಜಾರಿಯಾಗಲಿದೆ. ಗೋವಾ ಸ್ವಾಗತ ನ್ಯಾಯಮಂಡಳಿದ ಶಿಫಾರಸನ್ನು ಗೋವಾ ಸಿಎಂ ಮನೋಹರ ಪಾರೀಕರ್ ಸ್ವಾಗತಿಸಿದ್ದಾರೆ.
ಸುಪ್ರೀಂ ಮೆಟ್ಟಿಲೇರುವುದು ಖಚಿತ
ನ್ಯಾಯಮಂಡಳಿ ನೀಡಿರುವ ತೀರ್ಪು ಪ್ರಶ್ನಿಸಿ ಮೂರೂ ರಾಜ್ಯಗಳು ಸುಪ್ರಿಂ ಕೋರ್ಟ್ ಮೊರೆ ಹೋಗುವುದು ಬಹುತೇಕ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ