“ಮಹಾ’ ಮಳೆಗೆ ಸಿಲುಕಿದ ರೈಲು!

ಮುಂಬಯಿಯಲ್ಲಿ ಮತ್ತೆ ವರುಣನ ಅಬ್ಬರ

Team Udayavani, Jul 28, 2019, 5:48 AM IST

q-31

ಭಾರೀ ಮಳೆಯಿಂದಾಗಿ ಥಾಣೆ ಜಿಲ್ಲೆಯಲ್ಲಿ ಜಲಾವೃತವಾಗಿರುವ ಪ್ರದೇಶಗಳ ಪಕ್ಷಿನೋಟ.

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಸಾವಿರಕ್ಕೂ ಹೆಚ್ಚು ಜನರಿದ್ದ ರೈಲೊಂದು ಸಿಲುಕಿದ್ದ ಘಟನೆ ನಡೆದಿದೆ.ಶುಕ್ರವಾರ ರಾತ್ರಿಯಿಂದೀಚೆಗೆ ವಾಣಿಜ್ಯ ನಗರಿಯಲ್ಲಿ ಸುರಿದ ಧಾರಾಕಾರ ಮಳೆಯ ಪ್ರಭಾವವಿದು. ಮಳೆಯಿಂದ ಉಂಟಾದ ಪ್ರವಾಹದಿಂದ ರೈಲು ಹಳಿಯು ಸಂಪೂರ್ಣ ಜಲಾವೃತವಾದ ಕಾರಣ ರಾತ್ರಿ ಮುಂಬಯಿಯಿಂದ ಕೊಲ್ಹಾಪುರಕ್ಕೆ ಹೊರಟಿದ್ದ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲು ರತ್ನಗಿರಿಯ ಬದ್ಲಾಪುರದಲ್ಲಿ ಸಿಲುಕಿಕೊಂಡಿತು. ರೈಲು ನಿಂತಾಗ ಅದರಲ್ಲಿದ್ದ 9 ಗರ್ಭಿಣಿಯರು ಸಹಿತ1,050 ಪ್ರಯಾಣಿಕರು ಅತಂತ್ರ ಸ್ಥಿತಿಗೆ ತಲುಪಿದರು. ರೈಲಲ್ಲೇ ಉಳಿಯಲೂ ಆಗದೆ, ಕೆಳಗಿಳಿದು ಹೋಗಲೂ ಆಗದೆ ಸುಮಾರು 17 ಗಂಟೆಗಳನ್ನು ಆತಂಕದಲ್ಲೇ ಕಳೆದರು. ಕೊನೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಹಿತ ಹಲವು ಏಜೆನ್ಸಿಗಳು ನಡೆಸಿದ ಕಾರ್ಯಾಚರಣೆಯ ಫ‌ಲವಾಗಿ, ಎಲ್ಲ 1,050 ಮಂದಿಯೂ ಸುರಕ್ಷಿತವಾಗಿ ವಾಪಸಾದರು. ರಕ್ಷಣೆಗಾಗಿ ಎರಡು ಸೇನಾ ಹೆಲಿಕಾಪ್ಟರ್‌ ಹಾಗೂ ಎನ್‌ಡಿಆರ್‌ಎಫ್ನ 6 ಬೋಟ್‌ಗಳನ್ನು ಬಳಸಲಾಗಿತ್ತು. 17 ಗಂಟೆಗಳ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಿದ ರಕ್ಷಣಾ ತಂಡದ ಕಾರ್ಯಕ್ಕೆ ಗೃಹ ಸಚಿವ ಅಮಿತ್‌ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

9 ಗರ್ಭಿಣಿಯರು
ರೈಲಿನಲ್ಲಿ 9 ಮಂದಿ ಗರ್ಭಿಣಿಯರು ಹಾಗೂ ಒಂದು ತಿಂಗಳ ಹಸುಗೂಸು ಕೂಡ ಪ್ರಯಾಣಿಸುತ್ತಿತ್ತು. ಮೊದಲಿಗೆ ಇವರನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಕರೆತಂದ ಎನ್‌ಡಿಆರ್‌ಎಫ್ ಸಿಬಂದಿ, ನಂತರ ಉಳಿದ ಪ್ರಯಾಣಿಕರನ್ನು ರಕ್ಷಿಸಿತು.

ವಿಶೇಷ ರೈಲು ವ್ಯವಸ್ಥೆ
ರೈಲಿನಲ್ಲಿ ಸಿಲುಕಿದ್ದವರ ರಕ್ಷಣೆ ಬಳಿಕ ಅವರನ್ನು ಕೊಲ್ಹಾಪುರಕ್ಕೆ ಕರೆದೊಯ್ಯಲೆಂದೇ ಸರಕಾರವು ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. 19 ಬೋಗಿಗಳ ವಿಶೇಷ ರೈಲು ಕಲ್ಯಾಣ್‌ನಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಕೊಲ್ಹಾಪುರಕ್ಕೆ ತೆರಳಿತು.

ಜನಜೀವನ ತತ್ತರ
ಶುಕ್ರವಾರ ರಾತ್ರಿಯಿಂದೀಚೆಗೆ ಮುಂಬಯಿ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೆಲವು ಕಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆ, ರೈಲು, ವಿಮಾನ ಸಂಚಾರಕ್ಕೂ ತೊಂದರೆಯಾಗಿದ್ದು, 11 ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ರವಿವಾರ ಬೆಳಗ್ಗೆ ಧಾರಾಕಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮನೆಗಳಿಂದ ಹೊರಬರದಂತೆ ನಾಗರಿಕರಿಗೆ ಸೂಚಿಸಲಾಗಿದೆ.

ಮುಂಗಾರಿಗೆ 3 ದೇಶಗಳಲ್ಲಿ 600 ಬಲಿ
ಪ್ರಸಕ್ತ ವರ್ಷ ಮುಂಗಾರಿನ ಅಬ್ಬರದಿಂದಾಗಿ ಭಾರತ, ಬಾಂಗ್ಲಾದೇಶ, ನೇಪಾಲ ಮತ್ತು ಮ್ಯಾನ್ಮಾರ್‌ನಲ್ಲಿ ಸುಮಾರು 600 ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ ಮಾಹಿತಿ ನೀಡಿದೆ. ವರುಣನ ಆರ್ಭಟದ ಪರಿಣಾಮ 2.50 ಕೋಟಿ ಜನ ನಿರ್ವಸಿತರಾಗಿದ್ದಾರೆ ಎಂದೂ ಹೇಳಿದೆ. ಭಾರತದಲ್ಲಿ ಅಸ್ಸಾಂ, ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಮಳೆ, ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ರಾಜ್ಯಗಳಿಗೆ ಯುನಿಸೆಫ್ ಎಲ್ಲ ರೀತಿಯ ನೆರವು ನೀಡುತ್ತಿದೆ. ಇಲ್ಲಿ 43 ಲಕ್ಷ ಮಕ್ಕಳು ಸೇರಿದಂತೆ ಸುಮಾರು ಒಂದು ಕೋಟಿ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರಸ್‌ ಅವರ ಉಪ ವಕ್ತಾರ ಫ‌ರ್ಹಾನ್‌ ಹಖ್‌ ಹೇಳಿದ್ದಾರೆ.

ಮುಂಬಯಿ-ಗೋವಾ ಹೆದ್ದಾರಿ ಬಂದ್‌
ರತ್ನಗಿರಿ ಜಿಲ್ಲೆಯ ಜಗ್‌ಬುದಿ ನದಿಯಲ್ಲಿ ಪ್ರವಾಹ ಉಂಟಾದ ಕಾರಣ ಮಹಾರಾಷ್ಟ್ರದಲ್ಲಿನ ಮುಂಬಯಿ – ಗೋವಾ ರಾಷ್ಟ್ರೀಯ ಹೆದ್ದಾರಿಯನ್ನು ಶನಿವಾರ ಬೆಳಗ್ಗಿನಿಂದಲೇ ಬಂದ್‌ ಮಾಡಲಾಗಿದೆ. ಶುಕ್ರವಾರ ರಾತ್ರಿಯಿಂದೀಚೆಗೆ ಧಾರಾಕಾರ ಮಳೆ ಸುರಿದ ಕಾರಣ, ಥಾಣೆ, ರಾಯYಡ ಮತ್ತು ರತ್ನಗಿರಿ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ನದಿಯು ಉಕ್ಕಿ ಹರಿದು, ನೀರು ಹೆದ್ದಾರಿಗೆ ಹರಿದು ಬಂದ ಕಾರಣ, ಸಂಚಾರ ಸ್ಥಗಿತಗೊಳಿಸಲಾಯಿತು.

ಮಳೆಯಿಂದಾಗಿ ಗೋಚರತೆ ಪ್ರಮಾಣ ಕ್ಷೀಣಿಸಿರುವ ಕಾರಣ, ಮುಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸದಂತೆ ನಾಗರಿಕರಿಗೆ ಸೂಚನೆ

ಕಲ್ಯಾಣ್‌ನ ಕಟ್ಟಡವೊಂದರ ಮೇಲೆ ರಕ್ಷಣೆಗಾಗಿ ಕಾದಿದ್ದ 9 ಮಂದಿಯ ರಕ್ಷಿಸಿದ ವಾಯುಪಡೆ ಎಂಐ-17 ಕಾಪ್ಟರ್‌

ನಾಸಿಕ್‌ ಜಿಲ್ಲೆಯ ತ್ರ್ಯಂಬಕೇಶ್ವರದಲ್ಲಿ 24 ಗಂಟೆಗಳಲ್ಲಿ 140 ಮಿ.ಮೀ. ಮಳೆ.

ಅಸ್ಸಾಂನಲ್ಲಿ ಮಳೆ, ಪ್ರವಾಹ ಸಂಬಂಧಿ ಘಟನೆಗಳಿಗೆ ಬಲಿಯಾದವರ ಸಂಖ್ಯೆ 81ಕ್ಕೇರಿಕೆ

ಪ್ರವಾಹ ಪೀಡಿತ ಅಸ್ಸಾಂಗೆ ಉತ್ತರಾಖಂಡ ಸರಕಾರದಿಂದ 5 ಕೋ.ರೂ. ನೆರವು

ಅಸ್ಸಾಂ ಸಂತ್ರಸ್ತರಿಗೆಂದು 10 ಸಾವಿರ ಬೇಯಿಸದ ಆಹಾರ ಪ್ಯಾಕೆಟ್‌ಗಳು, 100 ಫ್ಯಾಮಿಲಿ ಕಿಟ್‌ಗಳು, 300 ಪ್ಯಾಕೆಟ್‌ ಮಿಲ್ಲೆಟ್‌ ನ್ಯೂಟ್ರಿಯಾ ಬಾರ್‌ಗಳನ್ನು ಕಳುಹಿಸುವುದಾಗಿ ಅಂತಾರಾಷ್ಟ್ರೀಯ ಹಸಿವು ನಿವಾರ ಸಂಸ್ಥೆ ದಿ ರೈಸ್‌ ಅಗೈನ್ಸ್‌ ಹಂಗರ್‌ ಇಂಡಿಯಾ ಘೋಷಣೆ

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಳೆಯಿಂದಾಗಿ ಭೂಕುಸಿತ- 82ರ ವೃದ್ಧೆ ಸಾವು, ವ್ಯಕ್ತಿಗೆ ಗಾಯ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.