ಗಡಚಿರೋಲಿ: 14 ನಕ್ಸಲರ ಹತ್ಯೆ
Team Udayavani, Apr 23, 2018, 6:00 AM IST
ಮುಂಬೈ/ನವದೆಹಲಿ: ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿ ನಕ್ಸಲೀಯರ ವಿರುದ್ಧ ವಿಶೇಷ ಕಾರ್ಯಪಡೆ ಕಾರ್ಯಾಚರಣೆ ನಡೆಸಿ 14 ಮಂದಿಯನ್ನು ಸದೆಬಡಿದಿದೆ. ಈ ಪೈಕಿ 12 ಮಂದಿ ಕೆಂಪು ಉಗ್ರರ ಮೃತದೇಹ ಸಿಕ್ಕಿದ್ದು, ಅಸುನೀಗಿದವರ ಪೈಕಿ ಇಬ್ಬರು ನಕ್ಸಲ್ ಕಮಾಂಡರ್ಗಳು ಕೂಡ ಸೇರಿದ್ದಾರೆ.
ಗಡಚಿರೋಲಿ ಜಿಲ್ಲೆಯ ಭಮ್ರಾಗಡದ ತಡ್ಗಾಂವ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗಿನಿಂದಲೇ ಖಚಿತ ಸುಳಿವಿನ ಮೇರೆಗೆ ನಕ್ಸಲೀಯರ ವಿರುದ್ಧ ವಿಶೇಷ ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಛತ್ತೀಸ್ಗಡದ ಬಿಜಾಪುರ ಜಿಲ್ಲೆಗೆ ಹೊಂದಿಕೊಂಡಿರುವ ಕಸನಾಸುರ್ ಅರಣ್ಯ ಪ್ರದೇಶದ ಸಮೀಪಕ್ಕೆ ವಿಶೇಷ ಪಡೆ ಸಮೀಪಿಸುತ್ತಿರುವಂತೆಯೇ ನಕ್ಸಲರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ಆರಂಭವಾಯಿತು. ಈ ಸಂದರ್ಭದಲ್ಲಿ 14 ಮಂದಿ ಕೆಂಪು ಉಗ್ರರು ಅಸುನೀಗಿದ್ದಾರೆ ಎಂದು ಮಹಾರಾಷ್ಟ್ರ ಐಜಿಪಿ ಶರದ್ ಶೇಲಾರ್ ಹೇಳಿದ್ದಾರೆ. ಅಸುನೀಗಿದ ನಕ್ಸಲರ ಪೈಕಿ 12 ಮಂದಿಯ ಮೃತದೇಹ ಸಿಕ್ಕಿದೆ. ಉಳಿದ ಎರಡು ದೇಹಗಳಿಗಾಗಿ ಶೋಧ ನಡೆದಿದೆ ಎಂದು ಐಜಿಪಿ ತಿಳಿಸಿದ್ದಾರೆ.
ಎನ್ಐಎ ತನಿಖೆ: ಇದೇ ವೇಳೆ ನಕ್ಸಲ್ ನಾಯಕರು ಮತ್ತು ಅವರ ಬಗ್ಗೆ ಮೃದು ಧೋರಣೆ ಹೊಂದಿರುವವರು ಅಕ್ರಮವಾಗಿ ಹಣ ವ್ಯವಹಾರ ನಡೆಸಿದ್ದಾರೆಯೇ ಹಾಗೂ ಅದನ್ನು ಅವರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಬಳಕೆ ಮಾಡಿದ್ದಾರೆಯೇ ಎಂಬ ಬಗ್ಗೆ ಎನ್ಐಎಯ ವಿಶೇಷ ಘಟಕ ತನಿಖೆ ನಡೆಸಲಿದೆ ಎಂದು ಗೃಹ ಇಲಾಖೆ ಅಧಿಕಾರಿ ಹೇಳಿದ್ದಾರೆ.
ಕಾರ್ಯಾಚರಣೆಗಳ ಮೂಲಕ ನಾವು ನಕ್ಸಲರ ಆತ್ಮವಿಶ್ವಾಸವನ್ನು ನುಚ್ಚುನೂರು ಮಾಡಿದ್ದೇವೆ. ಸದ್ಯದಲ್ಲೇ ದೇಶದಿಂದ ನಕ್ಸಲ್ ಸಿದ್ಧಾಂತವನ್ನು ನಿರ್ಮೂಲನೆ ಮಾಡಲಿದ್ದೇವೆ.
ರಾಜನಾಥ್ಸಿಂಗ್, ಕೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ