ನ್ಯಾಶನಲ್ ಹೈವೇಯಲ್ಲಿಯೇ ಪೊಲೀಸ್ ಕಸ್ಟಡಿಯಿಂದ ಮೂವರು ಆರೋಪಿಗಳು ಎಸ್ಕೇಪ್!
Team Udayavani, Aug 8, 2019, 11:49 AM IST
ಮಹಾರಾಷ್ಟ್ರ(ಪಾಲ್ಘಾರ್): ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಆಗುವ ವೇಳೆ ಮೂವರು ಕೈದಿಗಳು ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಘಟನೆ ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದರೋಡೆ ಪ್ರಕರಣದಲ್ಲಿ ಮೂವರು ಕೈದಿಗಳು ಥಾಣೆಯ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಬುಧವಾರ ಮೂವರನ್ನು ಮುಂಬೈನಿಂದ ದಾದ್ರಾ-ನಾಗರ್ ಹವೆಲಿ ಜಿಲ್ಲಾ ಕೋರ್ಟ್ ಗೆ ಪೊಲೀಸರು ಕರೆದೊಯ್ದಿದ್ದರು.
ಕೋರ್ಟ್ ವಿಚಾರಣೆ ನಂತರ ಮುಂಬೈಗೆ ವಾಪಸ್ ಆಗುತ್ತಿದ್ದ ವೇಳೆ ಕೈದಿಯೊಬ್ಬ ವಾಂತಿ ಬರುವುದಾಗಿ ತಿಳಿಸಿದ್ದರಿಂದ, ಮುಂಬೈ-ಅಹಮದಾಬಾದ್ ಹೈವೇಯ ಬದಿಯಲ್ಲಿ ಪೊಲೀಸ್ ವ್ಯಾನ್ ನಿಲ್ಲಿಸಿದ್ದರು. ಕೈದಿ ಕೆಳಗಿದ ಸಂದರ್ಭದಲ್ಲಿ ಮೂವರು ಕೈದಿಗಳು ಪೊಲೀಸರನ್ನು ತಳ್ಳಿಹಾಕಿ ಓಡಿ ಹೋಗಿರುವುದಾಗಿ ಪಾಲ್ಘಾರ್ ಪೊಲೀಸರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದರೋಡೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದ ಜೈರಾಮ್ ದಳ್ವಿ(21ವರ್ಷ), ಗಣೇಶ್ ದಳ್ವಿ(20ವರ್ಷ) ಮತ್ತು ಮಾರ್ಟಿನ್ ಮಾಧಾ(30ವರ್ಷ) ಪರಾರಿಯಾಗಿದ್ದು, ಮೂವರು ಕೈದಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ