ಮುಂಬೈ ಜನತೆಗೆ 10ರೂ.ಗೆ ಭರ್ಜರಿ ಊಟ: ಶಿವಸೇನಾ ನೇತೃತ್ವದ ಮಹಾ ವಿಕಾಸ್ ಅಘಾಡಿಯ ನೂತನ ಯೋಜನೆ
Team Udayavani, Dec 21, 2019, 8:34 AM IST
ಮುಂಬೈ: ಬೃಹತ್ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ) ತನ್ನ ನೌಕರರಿಗೆ 10. ರೂ ಗಳಿಗೆ ಊಟ ಕೊಡುವ ಯೋಜನೆಯನ್ನು ಜಾರಿಗೊಳಿಸಿದೆ. ಮಾತ್ರವಲ್ಲದೆ ನಗರದ ಜನತೆಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು ಮೇಯರ್ ಕಿಶೋರಿ ಫೆಢ್ನೆಕರ್ ತಿಳಿಸಿದ್ದಾರೆ.
ಬಿಎಂಸಿ ಮೇಯರ್ ಕಿಶೋರಿ ಫೆಢ್ನೆಕರ್ ಈ ಯೋಜನೆಯನ್ನು ಉದ್ಘಾಟನೆ ಮಾಡಿದ್ದಾರೆ. 10 ರೂ ಗಳಿಗೆ ಎರಡು ಚಪಾತಿ, ಅನ್ನ, ದಾಲ್, 2 ರೀತಿಯ ತರಕಾರಿಯ ಖಾದ್ಯಗಳು ಸಿಗುತ್ತವೆ. ಪ್ರಮುಖವೆಂದರೇ ಶಿವಸೇನಾ ತನ್ನ ಪ್ರಣಾಳಿಕೆಯಲ್ಲಿ ಈ 10 ರೂ ಊಟದ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿತ್ತು. ಈಗಾಗಲೇ ಮುಂಬೈ ನಗರಪಾಲಿಕೆ ತನ್ನ ನೌಕರರಿಗೆ 10 ರೂ. ಗೆ ಊಟ ಕೊಡುವ ಯೋಜನೆಯನ್ನು ಡಿಸೆಂಬರ್ 19 ರಂದೇ ಜಾರಿಗೊಳಿಸಿತ್ತು. ಇದನ್ನು ನಗರದ ನಾಗರಿಕರಿಗೆ ಕೂಡ ಸದ್ಯದಲ್ಲೇ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಎರಡು ದಿನದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈ ಯೋಜನೆಯನ್ನು ಎಲ್ಲಾ ಜನರಿಗೂ ವಿಸ್ತರಿಸಲಾಗುವುದು ಎಂದು ಕ್ಯಾಂಟಿನ್ ಮಾಲಿಕರು ತಿಳಿಸಿದ್ಧಾರೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿಯ (ಶಿವಸೇನಾ, ಎನ್ ಸಿಪಿ, ಕಾಂಗ್ರೆಸ್) ಸಾಮಾನ್ಯ ಪ್ರಣಾಳಿಕೆ ಯೋಜನೆ ಇದಾಗಿದ್ದು 10 ರೂ. ಗಳಿಗೆ ಊಟ ನೀಡುವುದಾಗಿ ಈ ಹಿಂದೆಯೇ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
MUST WATCH
ಹೊಸ ಸೇರ್ಪಡೆ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ