ಔರಂಗಾಬಾದ್ನಲ್ಲಿ ನೀರಿಗಾಗಿ ಗುಂಪು ಘರ್ಷಣೆ: 100 ಅಂಗಡಿ ಭಸ್ಮ
Team Udayavani, May 12, 2018, 10:56 AM IST
ಔರಂಗಾಬಾದ್ : ಧಾರ್ಮಿಕ ಸ್ಥಳವೊಂದರ ಅಕ್ರಮ ನೀರಿನ ಸಂಪರ್ಕವನ್ನು ಕಡಿದು ಹಾಕಿದ ಘಟನೆಗೆ ಸಂಬಂಧಿಸಿ ಎರಡು ವಿರೋಧಿ ಗುಂಪುಗಳ ನಡುವೆ ನಡೆದ ಮಾರಾಮಾರಿಯ ಪರಾಕಾಷ್ಠೆಯಲ್ಲಿ ಹಿಂಸೆ ಮತ್ತು ಕಿಚ್ಚುಡುವಿಕೆ ಸ್ಫೋಟಗೊಂಡು ಕನಿಷ್ಠ 100 ಅಂಗಡಿ ಮುಂಗಟ್ಟುಗಳು ಬೆಂಕಿಯಲ್ಲಿ ಸುಟ್ಟು ಕರಕಲಾದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ನಿನ್ನೆ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಗುಂಪು ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ವದಂತಿ ಇದ್ದು ಅದಿನ್ನೂ ದೃಢಪಟ್ಟಿಲ್ಲ . ನಗರದ ವಿವಿಧ ಭಾಗಗಳಲ್ಲಿ ಎರಡು ಗುಂಪುಗಳ ಉದ್ರಿಕ್ತ ಯುವಕರು ಬೀದಿಗಿಳಿದು ಹಿಂಸಾಚಾರ ನಡೆಸಿ ಕಲ್ಲೆಸೆತ ನಡೆಸಿರುವುದಾಗಿಯೂ ವರದಿಯಾಗಿದೆ.
ಉದ್ರಿಕ್ತರು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿರುವುದು ವಿಡಿಯೋ ಚಿತ್ರಿಕೆಗಳಲ್ಲಿ ಕಂಡುಬಂದಿದೆ. ನಸುಕಿನ ವೇಳೆಯ ಇನ್ನೊಂದು ವಿಡಿಯೋ ಚಿತ್ರಿಕೆಯಲ್ಲಿ ಪೊಲೀಸರು ಉದ್ರಿಕ್ತರತ್ತ ಕೆಲವು ಸುತ್ತುಗಳ ಫೈರಿಂಗ್ ನಡೆಸಿರುವುದು, ಅಶ್ರುವಾಯು ಕೋಶ ಸಿಡಿಸಿರುವುದು ಕಂಡು ಬಂದಿದೆ.
ಹಿಂಸೆ ಮತ್ತು ಗಲಭೆಯಲ್ಲಿ ಕನಿಷ್ಠ ಹತ್ತು ಮಂದಿ ಪೊಲಿಸರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಪೊಲೀಸರು ಔರಂಗಾಬಾದ್ ನಗರದಲ್ಲಿ ಸೆ.144 ಹೇರಿದ್ದಾರೆ.
ಅನೇಕರ ಟ್ಟಿಟರ್ನಲ್ಲಿ ಘಟನೆಯ ಬಗ್ಗೆ ಮಾಹಿತಿಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ