ಮರಾಠರಿಗೆ 16% ಮೀಸಲು?
Team Udayavani, Nov 16, 2018, 10:19 AM IST
ಮುಂಬಯಿ: ಮಹಾರಾಷ್ಟ್ರ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮರಾಠ ಸಮುದಾಯಕ್ಕೆ ಶೇ.16ರಷ್ಟು ಮೀಸಲು ನೀಡಲು ಶಿಫಾರಸು ಮಾಡಿದೆ. ಈ ಕ್ರಮ ಹಾಲಿ ಇರುವ ಮೀಸಲು ಪ್ರಮಾಣ ಶೇ.52ಕ್ಕೆ ಹೊರತಾಗಿದೆ. ಒಂದು ವೇಳೆ ಸರಕಾರ ಅದನ್ನು ಅಂಗೀಕರಿಸಿದರೆ ಒಟ್ಟು ಪ್ರಮಾಣ ಶೇ.68 ಆಗಲಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮರಾಠರಿಗೆ ಈ ವ್ಯವಸ್ಥೆ ಅನ್ವಯವಾಗಲಿದೆ.
ಮೀಸಲು ನೀಡುವ ಬಗ್ಗೆ ಅಧ್ಯಯನ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಡಿ.ಗಾಯಕ್ವಾಡ್ ನೇತೃತ್ವದ ಸಮಿತಿ ಮಹಾರಾಷ್ಟ್ರದ ಒಟ್ಟು ಜನಸಂಖ್ಯೆಯ ಶೇ.30 ಮಂದಿ ಮರಾಠರು ಸಾಮಾಜಿಕವಾಗಿಯೂ, ಆರ್ಥಿಕವಾಗಿಯೂ ಹಿಂದುಳಿದಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ ಎಂದು ಮೂಲಗಳು ಹೇಳಿವೆ. ಗುರುವಾರ ಮುಖ್ಯ ಕಾರ್ಯದರ್ಶಿ ಡಿ.ಕೆ.ಜೈನ್ ಅವರಿಗೆ ವರದಿಯನ್ನು ಸಮಿತಿ ಸಲ್ಲಿಸಿದೆ.
ಮೀಸಲು ನೀಡಬೇಕು ಎಂದು ಹಿಂಸಾತ್ಮಕ ಹೋರಾಟವೇ ನಡೆದಿತ್ತು. ಹೀಗಾಗಿ ಫಡ್ನವೀಸ್ ಸರಕಾರ 2017ರ ಜೂನ್ನಲ್ಲಿ ವಿಚಾರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಿತ್ತು. 2017ರ ಆಗಸ್ಟ್ನಿಂದ ಆಯೋಗ ಈ ಬಗ್ಗೆ ಅಧ್ಯಯನ ನಡೆಸಲು ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’