ಅಮರಾವತಿಯಲ್ಲಿ ಹಿಂಸೆಗೆ ತಿರುಗಿದ ಬಂದ್
Team Udayavani, Nov 14, 2021, 6:40 AM IST
ಮುಂಬಯಿ: ತ್ರಿಪುರಾ ಗಲಭೆಯ ಬೆಂಕಿ ಈಗ ಮಹಾರಾಷ್ಟ್ರಕ್ಕೂ ವ್ಯಾಪಿಸಿದೆ. ಶನಿವಾರ ಬಿಜೆಪಿ ಆಯೋ ಜಿಸಿದ್ದ ಅಮರಾವತಿ ಬಂದ್ ಹಿಂಸೆಗೆ ತಿರುಗಿದ್ದು, ಹಲವು ವಾಹನಗಳು, ಅಂಗಡಿ- ಮುಂಗಟ್ಟುಗಳು, ಧಾರ್ಮಿಕ ಕೇಂದ್ರಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ತ್ರಿಪುರಾದಲ್ಲಿ ಅಲ್ಪಸಂಖ್ಯಾಕರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಕೆಲವು ಮುಸ್ಲಿಂ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದವು. ಈ ವೇಳೆ ಕೆಲವು ಕಡೆ ಕಲ್ಲುತೂರಾಟದಂಥ ಘಟನೆಗಳು ನಡೆದಿದ್ದು, ಅದನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಶನಿವಾರ ಬಂದ್ಗೆ ಕರೆ ನೀಡಿದ್ದವು. ಬಂದ್ ವೇಳೆ ಲಾಲ್ಖಾಡಿ ಪ್ರದೇಶ, ಚಾಂದಿನಿ ಚೌಕ್, ಪಠಾಣ್ ಚೌಕ್ನಲ್ಲಿ ಪ್ರತಿಭಟನಕಾರರ ಗುಂಪು, ಏಕಾಏಕಿ ಅಂಗಡಿಗಳು, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿತು. ರಾಜ್ಕಮಲ್ ಚೌಕ್ನಲ್ಲಿ ಕಾರು ಗಳಿಗೂ ಬೆಂಕಿ ಹಚ್ಚಿ, ಕೆಲವು ಧಾರ್ಮಿಕ ಕೇಂದ್ರ ಗಳಿಗೂ ಹಾನಿ ಮಾಡಿತು. ಹಲವು ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?