ವಿಧಾನಪರಿಷತ್ ಚುನಾವಣೆ: ಬಿಜೆಪಿಗೆ ಭಾರೀ ಹಿನ್ನಡೆ, 5 ಕ್ಷೇತ್ರದಲ್ಲಿ ಗೆದ್ದ ಮಹಾಮೈತ್ರಿಕೂಟ
ಪಟೇಲ್ ದುಲೇ ನಂದುರ್ಬಾರ್ ಪದವೀಧರ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.
Team Udayavani, Dec 4, 2020, 2:59 PM IST
ಮುಂಬೈ:ಜಿದ್ದಾಜಿದ್ದಿನ ಕಣವಾಗಿದ್ದ ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಮಹಾಮೈತ್ರಿಕೂಟ) ಗೆಲುವಿನ ನಗು ಬೀರಿದೆ. ವಿಧಾನಪರಿಷತ್ ನ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದ ಧುಲೇ-ನಂದುರ್ಬಾರ್ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಜಯ ಸಾಧಿಸಿದೆ ಎಂದು ವರದಿ ತಿಳಿಸಿದೆ. ಭಾರತೀಯ ಜನತಾ ಪಕ್ಷದ ಅಮರೀಶ್ ರಷಿಕಲಾಲ್ ಪಟೇಲ್ ದುಲೇ ನಂದುರ್ಬಾರ್ ಪದವೀಧರ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಪಟೇಲ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.
ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಶರದ್ ಪವಾರ್ ನೇತೃತ್ವದ ಎನ್ ಸಿಪಿ ರಾಜ್ಯ ಮೇಲ್ಮನೆ ಚುನಾವಣೆಯಲ್ಲಿ ಔರಂಗಬಾದ್ ಮತ್ತು ಪುಣೆ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಎನ್ ಸಿಪಿಯ ಸತೀಶ್ ಚವಾಣ್ ಔರಂಗಬಾದ್ ಪದವೀಧರ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಬಿಜೆಪಿಯ ಶಿರೀಶ್ ಬೋರಾಲ್ಕಾರ್ ಅವರನ್ನು ಪರಾಜಯಗೊಳಿಸಿದ್ದಾರೆ. ಚವಾಣ್ ಪರವಾಗಿ 1,16,638 ಮತ ಚಲಾವಣೆಯಾಗಿದ್ದರೆ, ಬೋರಾಲ್ಕಾರ್ 58, 743 ಮತ ಪಡೆದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದರು.
ಪುಣೆ ವಿಭಾಗದ ಪದವೀಧರ ಕ್ಷೇತ್ರದಲ್ಲಿ ಎನ್ ಸಿಪಿಯ ಅರುಣ್ ಲಾಡ್ ಪ್ರತಿಸ್ಪರ್ಧಿ ಬಿಜೆಪಿಯ ಸಂಗ್ರಾಮ್ ದೇಶ್ ಮುಖ್ ಅವರನ್ನು ಸೋಲಿಸಿದ್ದಾರೆ. ಲಾಡ್ ಪರವಾಗಿ 1,22,145 ಮತ ಚಲಾವಣೆಯಾಗಿದ್ದು, ದೇಶ್ ಮುಖ್ 73,321 ಮತ ಪಡೆದಿರುವುದಾಗಿ ವರದಿ ವಿವರಿಸಿದೆ.
ಪುಣೆ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಸೋಲನ್ನನುಭವಿಸಿರುವುದು ಪಕ್ಷದ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪುಣೆ ಸ್ಥಾನ ಗೆಲ್ಲಲು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜತೆಗೂಡಿ ಭರ್ಜರಿ ಪ್ರಚಾರ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್