Online Gambling: ಆನ್ಲೈನ್ ಜೂಜಾಟ; 5 ಕೋಟಿ ಗೆದ್ದು, 58 ಕೋಟಿ ರೂ. ಕಳೆದುಕೊಂಡ ಉದ್ಯಮಿ
ಆರೋಪಿ ಮನೆಯಲ್ಲಿ ಸಿಕ್ತು 14 ಕೋಟಿ ರೂ. ನಗದು.!
Team Udayavani, Jul 23, 2023, 10:33 AM IST
ನಾಗ್ಪುರ: ಆನ್ ಲೈನ್ ಜೂಜಾಟದಿಂದ ಉದ್ಯಮಿಯೊಬ್ಬರು 58 ಕೋಟಿ ರೂ.ವನ್ನು ಕಳೆದುಕೊಂಡು ಮೋಸ ಹೋಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.
ಆರೋಪಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದೆ.
ಜೈನ್ ಅವರು ನಾಗ್ಪುರ ಮೂಲದ ಉದ್ಯಮಿಯೊಬ್ಬರಿಗೆ ಆನ್ ಲೈನ್ ಜೂಜಾಟದ ಬಗ್ಗೆ ಮಾಹಿತಿಯನ್ನು ಕೊಟ್ಟು, ಅದರಲ್ಲಿ ಲಾಭದಾಯಕವಾಗಿ ಹಣವನ್ನು ಮಾಡಬಹುದೆಂದು ಹೇಳಿದ್ದಾರೆ. ಇದಕ್ಕೆ ಮೊದಲು ಉದ್ಯಮಿ ಒಪ್ಪಲಿಲ್ಲ. ಆದರೆ ನಿರಂತರವಾಗಿ ಜೈನ್ ಉದ್ಯಮಿಯ ಮನವೊಲಿಸಿದ್ದಾರೆ. ಇದರ ಜೊತೆಗೆ ಹವಾಲಾ ವ್ಯಾಪಾರಿಯ ಮೂಲಕ 8 ಲಕ್ಷ ರೂ.ವನ್ನು ಖಾತೆಗೆ ವರ್ಗಾಯಿಸಿದ್ದಾರೆ.
ಮೊದಲು ಆನ್ ಲೈನ್ ಜೂಜಾಟದ ಲಿಂಕ್ ವೊಂದನ್ನು ವಾಟ್ಸಪ್ ಮೂಲಕ ಜೈನ್ ಉದ್ಯಮಿಗೆ ಕಳುಹಿಸಿದ್ದಾರೆ. ಆನ್ ಲೈನ್ ಜೂಜಾಟದ ಖಾತೆಯಲ್ಲಿ 8 ಲಕ್ಷ ರೂ. ಇಟ್ಟಿರುವುದನ್ನು ನೋಡಿ, ಉದ್ಯಮಿ ಜೂಜಾಟವನ್ನು ಆರಂಭಿಸಿದ್ದಾರೆ. ಆರಂಭಿಕವಾಗಿ ಉದ್ಯಮಿಗೆ ಯಶಸ್ವಿ ಸಿಕ್ಕಿದೆ. ಅವರು ಜೂಜಾಟದ ಮೂಲಕ ಹಣ ಗಳಿಸಿದ್ದಾರೆ. 5 ಕೋಟಿ ರೂ.ವನ್ನು ಗೆದ್ದ ಬಳಿಕ, ಅವರು 58 ಕೋಟಿ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗುತ್ತಿದ್ದೇನೆ ಎಂದು ಶಂಕಿಸಿ ಉದ್ಯಮಿ ಜೈನ್ ಬಳಿ ತನ್ನ ಹಣವನ್ನು ವಾಪಾಸ್ ಕೇಳಿದ್ದಾರೆ. ಆದರೆ ಆತ ಹಣ ವಾಪಾಸ್ ನೀಡಲು ನಿರಾಕರಿಸಿದ್ದಾರೆ ಎಂದು ಘಟನೆ ಕುರಿತು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದರು.
ಈ ಸಂಬಂಧ ಉದ್ಯಮಿ ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಜೈನ್ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ.
ಇದೇ ವೇಳೆ ಪೊಲೀಸರು ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಆರೋಪಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಈ ವೇಳೆ ಆರೋಪಿ ಅಲ್ಲಿಂದ ಮೊದಲೇ ಪರಾರಿಯಾಗಿದ್ದಾನೆ. ಆತ ದುಬೈಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿರುವುದಾಗಿ ವರದಿ ತಿಳಿಸಿದೆ.
ದಾಳಿಯ ವೇಳೆ 14 ಕೋಟಿ ರೂ. ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್ಗಳು ಸೇರಿದಂತೆ ಗಣನೀಯ ಪ್ರಮಾಣದ ಸಾಕ್ಷ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು