ಎನ್ಸಿಸಿ ಮುಖಂಡ,ಸಚಿವ ನವಾಬ್ ಮಲಿಕ್ಗೆ ಜಾಮೀನು
Team Udayavani, Nov 29, 2021, 10:15 PM IST
ಮುಂಬೈ: ಎನ್ಸಿಸಿ ಮುಖಂಡ, ಸಚಿವ ನವಾಬ್ ಮಲಿಕ್ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ಸೋಮವಾರ ಜಾಮೀನು ನೀಡಿದೆ.
ಮಲಿಕ್ ಅವರಿಗೆ ವೈಯಕ್ತಿಕ ಬಾಂಡ್ 15 ಸಾವಿರ ರೂ. ನೀಡುವಂತೆಯೂ ನ್ಯಾಯಾಲಯ ಆದೇಶ ನೀಡಿದೆ.
ಮುಂಬೈ ಬಿಜೆಪಿಯ ಯುವ ಮೋರ್ಚಾ ಘಟಕದ ಅಧ್ಯಕ್ಷ ಮೋಹಿತ್ ಕಾಂಬೋಜ್ ಭಾರತೀಯ ಅವರು ಸಚಿವ ಮಲಿಕ್ ವಿರುದ್ಧ ಮೊಕದ್ದಮೆ ಹೂಡಿದ್ದರು.
ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಪುತ್ರ ಇದ್ದ ವಿಲಾಸಿ ನೌಕೆಗೆ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ಸಿಬಿ) ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಅವರ ಭಾವ ಇದ್ದರು ಎಂದು ಸಚಿವ ಮಲಿಕ್ ಆರೋಪಿಸಿದ್ದರು. ಈ ಮಾತುಗಳ ವಿರುದ್ಧ ಮೋಹಿತ್ ಕಾಂಬೋಜ್ ಭಾರತೀಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಸಚಿವರಿಗೆ ನೋಟಿಸ್ ಜಾರಿ ಮಾಡಿತ್ತು.
ಇದನ್ನೂ ಓದಿ:ಕುಣಿಗಲ್: ನೀರಿನಲ್ಲಿ 4 ಮಂದಿ ಕೊಚ್ಚಿಹೋದ ಪ್ರಕರಣ; 2 ಮೃತದೇಹ ಪತ್ತೆ, ಮುಂದುವರಿದ ಶೋಧಕಾರ್ಯ
ವಾಂಖೆಡೆ ಅರ್ಜಿ ವಜಾ:
ಮಾದಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದೇ ಆಗಿರುವ ಮತ್ತೂಂದು ಪ್ರಕರಣದಲ್ಲಿ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ ಸಚಿವ ಮಲಿಕ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಸಚಿವ ಮಲಿಕ್ ತಮ್ಮ ಹಾಗೂ ಕುಟುಂಬದ ವಿರುದ್ಧ ಟ್ವೀಟ್ ಮಾಡದಂತೆ ತಡೆಯೊಡ್ಡಬೇಕು ಎಂದು ಅರಿಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ