100 ಯೂನಿಟ್ ಉಚಿತ ವಿದ್ಯುತ್ ನೀಡಲು ಚಿಂತಿಸುತ್ತಿರುವ ಮಹಾರಾಷ್ಟ್ರ ಸರಕಾರ
Team Udayavani, Feb 8, 2020, 5:44 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ಅವರ ನೇತೃತ್ವದ ಸರಕಾರವು ದಿಲ್ಲಿಯ ಕೇಜ್ರಿವಾಲ್ ಸರಕಾರದ ಹಾದಿಯಲ್ಲಿ ನಡೆಯುವ ಮೂಲಕ ಅನೇಕ ಉಚಿತ’ ಯೋಜನೆಗಳನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಉಚಿತ ಯೋಜನೆ ಅಡಿಯಲ್ಲಿ ಮಹಾರಾಷ್ಟ್ರ ಸರಕಾರವು ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಉಚಿತ ನೀಡಲು ಯೋಚಿಸುತ್ತಿದೆ.
ಮಾಹಿತಿ ಪ್ರಕಾರ, ಸರಕಾರ ಈ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಇಂಧನ ಇಂಧನ ಇಲಾಖೆಯ ಅಧಿಕಾರಿಗಳಲ್ಲಿ ವರದಿ ನೀಡುವಂತೆ ಸಚಿವ ಡಾ.ನಿತಿನ್ ರಾವುತ್ ಅವರು ಆದೇಶಿಸಿದ್ದಾರೆ.
ಉಚಿತವಾಗಿ ವಿದ್ಯುತ್ ಒದಗಿಸುವ ಯೋಜನೆ ಬಗ್ಗೆ ಇಂಧನ ಸಚಿವ ನಿತೀನ್ ರಾವುತ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಎÇÉಾ ವಿದ್ಯುತ್ ಗ್ರಾಹಕರಿಗೆ 100 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಮಾಡಿಕೊಂಡಿದೆ. ಈ ಬಗ್ಗೆ ಸಂಪೂರ್ಣ ವರದಿಯನ್ನು ಮೂರು ತಿಂಗಳೊಳಗೆ ಸಲ್ಲಿಸುವಂತೆ ಇಂಧನ ಇಲಾಖೆಯ ಅಧಿಕಾರಿಗಳಲ್ಲಿ ಹೇಳಲಾಗಿದೆ ಎಂದರು.
ಆದರೆ ರಾವುತ್ ಅವರ ನಿರ್ಧಾರದಿಂದ ವಿಶ್ಲೇಷಕರ ಕೆಲವು ಅನುಮಾನಗಳು ಹುಟ್ಟುಹಾಕಿಕೊಂಡಿದೆ. ವಿಶ್ಲೇಷಕರ ಪ್ರಕಾರ, ಉಚಿತ ವಿದ್ಯುತ್ ನೀಡುವುದರಿಂದ ರಾಜ್ಯಸರಕಾರದ ಖಜಾನೆಯ ಮೇಲೆ ಹೊರೆ ಹೆಚ್ಚಾಗಲಿದೆ ಮತ್ತು ಇದರಿಂದ ರಾಜ್ಯದ ಆರ್ಥಿಕ ಸ್ಥಿತಿಗೆ ಧಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.
ಇಂಧನ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಪ್ರಕಾರ, ಸರಕಾರವು ರಾಜ್ಯದ ಜನರಿಗೆ ಅಗ್ಗ ದರದಲ್ಲಿ ವಿದ್ಯುತ್ ಒದಗಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈ ಯೋಜನೆಯ ಅಡಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಸರಕಾರದ ವತಿಯಿಂದ ರೈತರು ಮತ್ತು ಕೈಗಾರಿಕೆ ಕ್ಷೇತ್ರಗಳಿಗೆ ಸಬ್ಸಿಡಿ ವಿದ್ಯುತ್ ಒದಗಿಸಲಾಗುತ್ತಿದೆ. ಹಾಗೆಯೇ ಉತ್ಪಾದನಾ ವೆಚ್ಚದಲ್ಲಿ ಕಡಿತ ಮತ್ತು ಬಾಕಿ ಇರುವ ವಿದ್ಯುತ್ ಬಿಲ್ಗಳನ್ನು ವಸೂಲಿ ಮಾಡುವುದರಿಂದ ಇಂಧನ ಸಚಿವರ ಕನಸು ನನಸಾಗಿಸಬಹುದು.
ಮಹಾರಾಷ್ಟ್ರದಲ್ಲಿ ವಿದ್ಯುತ್ ಗ್ರಾಹಕರು ಸುಮಾರು 36,000 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಪಾವತಿಸಲು ಬಾಕಿ ಉಳಿದಿದೆ. ಬಿಲ್ ಪಾವತಿಸದವರಲ್ಲಿ ರೈತರ ಸಂಖ್ಯೆ ಹೆಚ್ಚು. ಒಂದುವೇಳೆ ಈ ಬಿಲ್ಗಳನ್ನು ವಸೂಲಿ ಮಾಡಿದರೆ, ಸಾಮಾನ್ಯ ಜನರಿಗೆ, ರೈತರಿಗೆ ಮತ್ತು ಕೈಗಾರಿಕೋದ್ಯಮಿಗಳಿಗೆ 100 ಯೂನಿಟ್ಗಳವರೆಗೆ ವಿದ್ಯುತ್ ಉಚಿತವಾಗಿ ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.
ಸರಕಾರದ ವತಿಯಿಂದ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದರಿಂದ ಸಾಮಾನ್ಯ ನಾಗರಿಕರಿಗೆ ಹೆಚ್ಚು ಸಾಕಷ್ಟು ಪರಿಹಾರ ಸಿಗಲಿದೆ. ಆದರೆ, 200 ಕ್ಕೂ ಹೆಚ್ಚು ಯೂನಿಟ್ಗಳನ್ನು ಬಳಸುವ ಗ್ರಾಹಕರಿಗೂ ಸಬ್ಸಿಡಿ ನೀಡುವಂತೆ ಬೇಡಿಕೆಗಳು ಮಾಡಲಾಗುತ್ತಿದೆ. 200 ಯೂನಿಟ್ಗಳವರೆಗೆ ಬಳಕೆ ಮಾಡುವ ಗ್ರಾಹಕರಿಗೂ ಸಬ್ಸಿಡಿ ನೀಡುವ ಪ್ರಸ್ತಾಪವನ್ನೂ ಪರಿಗಣಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇಜ್ರಿವಾಲ್ ಸರಕಾರವು ದಿಲ್ಲಿಯ ಜನರಿಗೆ ದೊಡ್ಡ ಘೋಷಣೆ ಮಾಡಿದೆ. ಈಗ 200 ಯೂನಿಟ್ಗಳವರೆಗೆ ವಿದ್ಯುತ್ ಬಳಸುವ ಗ್ರಾಹಕರಿಗೆ ಯಾವುದೇ ಬಿಲ್ ಇರುವುದಿಲ್ಲ. 200ಕ್ಕಿಂತ ಒಂದು ಯೂನಿಟ್ ಅಂದರೆ 201 ಯೂನಿಟ್ ಬಳಕೆ ಮಾಡುವ ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಬೇಕು. ಹಾಗೆಯೇ 400 ಯೂನಿಟ್ ವಿದ್ಯುತ್ ಬಳಕೆಯ ಮೇಲೆ ಸಬ್ಸಿಡಿ ನೀಡಲಿದೆ ಎಂದು ಘೋಷಿಸಿದೆ. ಅದೇ ಮಾರ್ಗವನ್ನು ಮಹಾರಾಷ್ಟ್ರ ಸರಕಾರವು ಅನುಸರಿಸುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ