ಮನೆ ತೊರೆದಿದ್ದೇನೆ, ಬದ್ಧತೆ ಅಲ್ಲ: ಸಿಎಂ ಉದ್ಧವ್‌ ಭಾವನಾತ್ಮಕ ಭಾಷಣ


Team Udayavani, Jun 25, 2022, 12:33 AM IST

ಮನೆ ತೊರೆದಿದ್ದೇನೆ, ಬದ್ಧತೆ ಅಲ್ಲ: ಸಿಎಂ ಉದ್ಧವ್‌ ಭಾವನಾತ್ಮಕ ಭಾಷಣ

ಮುಂಬಯಿ: “ನಾವು ಸತ್ತರೂ ಶಿವಸೇನೆಯನ್ನು ಮಾತ್ರ ಬಿಡುವುದಿಲ್ಲ ಎಂದು ಹೇಳುತ್ತಿದ್ದವರು, ಇಂದು ಓಡಿಹೋಗಿದ್ದಾರೆ. ನಾನು ನನ್ನ ಅಧಿಕೃತ ನಿವಾಸವನ್ನು ತೊರೆದಿರಬಹುದು, “ಬದ್ಧತೆ’ ಯನ್ನಲ್ಲ. ಕೊನೆಯವರೆಗೂ ನನ್ನ ಹೋರಾಟ ಮುಂದುವರಿಯಲಿದೆ.

ಇದು ಅಧಿಕಾರದ ಗದ್ದುಗೆಯಿಂದ ಇಳಿಯುವ ಹಂತಕ್ಕೆ ತಲುಪಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಆಡಿರುವ ಮಾತು. ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಭಾಷಣ ಮಾಡಿ ರುವ ಅವರು, ತಮ್ಮದೇ ಪಕ್ಷದ ನಾಯಕರು ತಮ್ಮ ಬೆನ್ನಿಗೆ ಚೂರಿ ಇರಿದರು ಎಂದು ಆರೋಪಿಸಿದ್ದಾರೆ.

ಶಿಂಧೆಗಾಗಿ ಎಲ್ಲವನ್ನೂ ಮಾಡಿದ್ದೆ: “ಏಕನಾಥ ಶಿಂಧೆ ಅವರ ಮಗ ಶ್ರೀಕಾಂತ್‌ ಶಿಂಧೆಯೂ ಶಿವಸೇನೆಯ ಸಂಸದ. ಅವರಿಗಾಗಿ ನಾನು ಎಲ್ಲ ವನ್ನೂ ಮಾಡಿದ್ದೇನೆ. ನನ್ನ ಬಳಿಯಿದ್ದ ಖಾತೆ ಯನ್ನೂ ಶಿಂಧೆಗೆ ಕೊಟ್ಟಿದ್ದೆ. ನಾನೇನೂ ಅಧಿಕಾ ರದ ಆಸೆಗೆ ಬಿದ್ದಿಲ್ಲ. ಆದರೆ ಶಿವಸೇನೆಯನ್ನು ಸತ್ತರೂ ಬಿಡುವುದಿಲ್ಲ ಎಂದವರು ಈಗ ಓಡಿ ಹೋಗಿ ಎಲ್ಲೋ ಕುಳಿತಿದ್ದಾರೆ’ ಎಂದು ಬಂಡಾಯ ಶಾಸಕರ ವಿರುದ್ಧ ಉದ್ಧವ್‌ ಕಿಡಿಕಾರಿದ್ದಾರೆ.

ಶಾಸಕರಿಗೆ ಸವಾಲು: ಇದೇ ವೇಳೆ, “ನಮ್ಮ ತಂದೆ ಬಾಳಾಸಾಹೇಬ್‌ ಠಾಕ್ರೆ ಅವರ ಹೆಸರಿಲ್ಲದೇ ನೀವು ಜನರ ಮುಂದೆ ಹೋಗಿ ನೋಡೋಣ’ ಎಂದು ಬಂಡಾಯ ಶಾಸಕರಿಗೆ ಉದ್ಧವ್‌ ಸವಾಲು ಹಾಕಿದ್ದಾರೆ. ಪಕ್ಷದ ಶಾಸಕರ ಭೇಟಿಗೆ ಉದ್ಧವ್‌ ಲಭ್ಯವಾಗುತ್ತಿರಲಿಲ್ಲ ಎಂಬ ಆರೋಪದ ಬಗ್ಗೆಯೂ ಸ್ಪಷ್ಟನೆ ನೀಡಿದ ಸಿಎಂ, “ನನ್ನ ಆರೋಗ್ಯ ಸಮಸ್ಯೆಯ ಕಾರಣಕ್ಕೆ ನಾನು ಎಲ್ಲರನ್ನೂ ಭೇಟಿಯಾಗುತ್ತಿರಲಿಲ್ಲ. ನನಗೆ ಕಣ್ಣು ತೆರೆಯಲೂ ಆಗುತ್ತಿರಲಿಲ್ಲ. ಕುತ್ತಿಗೆ ಹಾಗೂ ತಲೆ ನೋವಿನಿಂದಲೂ ಬಳಲುತ್ತಿದ್ದೆ. ಆದರೆ ವಿರೋಧಿಗಳು ಈಗ ನನ್ನ ಅನಾರೋಗ್ಯದ ಲಾಭ ಪಡೆದರು’ ಎಂದಿದ್ದಾರೆ. ತಮ್ಮ ಭಾಷಣದಲ್ಲಿ ಶಿವಾಜಿ ಮಹಾರಾಜ್‌ ಹೆಸರನ್ನು ಪ್ರಸ್ತಾಪಿಸಿದ ಉದ್ಧವ್‌, “ಶಿವಾಜಿ ಮಹಾರಾಜ್‌ ಸೋತಾಗಲೂ, ಜನರು ಅವರ ಕೈಬಿಟ್ಟಿರಲಿಲ್ಲ’ ಎಂದು ಸ್ಮರಿಸಿದ್ದಾರೆ.

ಅಭಿವೃದ್ಧಿ ಕಾರ್ಯ ನಿಲ್ಲುವಂತಿಲ್ಲ: ಪ್ರಸ್ತುತ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಡಕು ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಸಿಎಂ ಉದ್ಧವ್‌ ಸೂಚಿಸಿದ್ದಾರೆ. ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು ಮತ್ತು ಸರ್ಕಾರಿ ಇಲಾಖೆಗಳ ಕಾರ್ಯದರ್ಶಿಗಳು ಭಾಗಿಯಾಗಿದ್ದ ಪ್ರಗತಿ ಪರಿಶೀಲನ ಸಭೆಯಲ್ಲಿ ಸಿಎಂ ಈ ಸೂಚನೆ ನೀಡಿದ್ದಾರೆ. ಜನರ ಕ್ಷೇಮಾಭಿವೃದ್ಧಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಬೇಡಿ. ನೇರವಾಗಿ ನನ್ನನ್ನೇ ಸಂಪರ್ಕಿಸಿ ಎಂದಿದ್ದಾರೆ.

ಸಂಧಾನಕಾರನ ಬಂಧನ: ಬಂಡಾಯ ಶಾಸಕರೊಂದಿಗೆ ಮಾತುಕತೆ ನಡೆಸಿ ಮನವೊಲಿಸ ಲೆಂದು ಅಸ್ಸಾಂಗೆ ತೆರಳಿದ್ದ ಶಿವಸೇನೆಯ ನಾಯಕ ಸಂಜಯ್‌ ಭೋಸ್ಲೆ ಅವರನ್ನು ಗುವಾ ಹಾಟಿ ಪೊಲೀಸರು ಬಂಧಿಸಿದ್ದಾರೆ. ಶಾಸಕರು ತಂಗಿರುವ ಹೊಟೇಲ್‌ನೊಳಗೆ ಪ್ರವೇಶಿಸಲು ಅವಕಾಶ ನೀಡದ್ದರಿಂದ ಕ್ರುದ್ಧರಾದ ಸಂಜಯ್‌, ಹೊಟೇಲ್‌ ಹೊರಗೆ ಫ‌ಲಕವೊಂದನ್ನು ಹಿಡಿದು ಪ್ರತಿಭಟನೆ ಆರಂಭಿಸಿದರು. ಅಲ್ಲಿಗೆ ಬಂದ ಪೊಲೀಸರು, ಸಂಜಯ್‌ರನ್ನು ಬಂಧಿಸಿದ್ದು “ಸೂಕ್ಷ್ಮ ಪ್ರದೇಶ’ವಾದ ಕಾರಣ ಈ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

182 ಯೋಜನೆಗಳಿಗೆ ಹಣ ಬಿಡುಗಡೆಗೆ ಆದೇಶ!
ಸರಕಾರ ಪತನದ ಅಂಚಿನಲ್ಲಿರುವಂತೆಯೇ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸಚಿವರು ಸಾವಿ ರಾರು ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಜಾರಿ ಮಾಡಿದ್ದಾರೆ. ಅಭಿವೃದ್ಧಿ ಕೆಲಸಗಳಿಗಾಗಿ ಈ ಹಣ ಬಿಡುಗಡೆಗೆ ಆದೇಶಿಸಲಾಗಿದ್ದರೂ, ಬಿಡುಗಡೆಯ ಪ್ರಮಾಣ ವಿಪಕ್ಷ ಬಿಜೆಪಿಗೆ ಆಘಾತ ತರಿಸಿದೆ. ಅದು ರಾಜ್ಯಪಾಲರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದೆ. ಜೂ. 20ರಿಂದ 23ರ ನಡುವೆ 182 ಸರ‌ಕಾರಿ ಆದೇಶಗಳನ್ನು ಹೊರಡಿಸಲಾಗಿದೆ! ಕೇವಲ ಜೂ. 17ರಲ್ಲೊಂದೇ 107 ಆದೇಶಗಳು (ಗವರ್ನ  ಮೆಂಟ್‌ ರೆಸಲ್ಯೂಷನ್ಸ್‌) ಹೊರಬಿದ್ದಿವೆ. ಬಹುಶಃ ಸರಕಾರ ಬೀಳುವ ಸುಳಿವು ಸಿಕ್ಕಿರುವು ದರಿಂದ ಕಾಂಗ್ರೆಸ್‌-ಎನ್‌ಸಿಪಿ ಸಚಿವರು ಈ ಕೆಲಸಕ್ಕೆ ಕೈಹಾಕಿರಬಹುದು ಎಂದು ಊಹಿಸಲಾ ಗಿದೆ. ಒಂದು ವೇಳೆ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಮಧ್ಯಪ್ರವೇಶಿಸಿದರೆ ಏನಾಗಬ ಹುದು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯಾದ್ಯಂತ ಅಲರ್ಟ್‌
ಬಂಡಾಯದ ವಿರುದ್ಧ ಶಿವಸೇನೆ ಕಾರ್ಯ ಕರ್ತರು ಬೀದಿಗಿಳಿಯುವ ಸಾಧ್ಯತೆಗಳಿರುವ ಕಾರಣ ಮಹಾರಾಷ್ಟ್ರ ಪೊಲೀಸರು ರಾಜ್ಯಾ ದ್ಯಂತ ಹೈ ಅಲರ್ಟ್‌ ಘೋಷಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಿ ಎಂದು ಎಲ್ಲ ಜಿಲ್ಲೆಗಳ ಎಸ್‌ಪಿಗಳು ಮತ್ತು ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಶುಕ್ರ ವಾರ ಕೊಲ್ಹಾಪುರದಲ್ಲಿ ನೂರಾರು ಸಂಖ್ಯೆ ಯಲ್ಲಿ ಸೇನೆ ಕಾರ್ಯಕರ್ತರು ಬಂಡಾಯ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನಾಸಿಕ್‌ನಲ್ಲಿ ಶಿಂಧೆಯ ಪರ ಹಾಕಲಾಗಿದ್ದ ಪೋಸ್ಟರ್‌ಗೆ ಮಸಿ ಬಳಿಯಲಾಗಿದೆ, ಕುರ್ಲಾ ಶಾಸಕನ ಕಚೇರಿಯ ಹೊರಗೆ ಹಾಕಲಾಗಿದ್ದ ಫ‌ಲಕಗಳನ್ನು ಧ್ವಂಸ ಮಾಡ ಲಾಗಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಭದ್ರತೆ ಹೆಚ್ಚಿಸಲಾಗಿದೆ

ಎಲ್ಲರಿಗೂ ಸ್ವಾಗತ!
ಮಹಾರಾಷ್ಟ್ರದ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಹೇಳಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, “ಕೆಲವು ವ್ಯಕ್ತಿಗಳು ಅಸ್ಸಾಂಗೆ ಬಂದಿದ್ದಾರೆ. ಹೊಟೇಲ್‌ ಬುಕ್‌ ಮಾಡಿದ್ದಾರೆ. ನನಗೆ ಖುಷಿಯಾಗಿದೆ. ಏಕೆಂದರೆ ಇದರಿಂದ ನಮ್ಮ ರಾಜ್ಯದ ಆರ್ಥಿಕತೆ ಅಭಿವೃದ್ಧಿಯಾ ಗುತ್ತದೆ. ಪ್ರವಾಸೋದ್ಯಮಕ್ಕೂ ನೆರವಾಗು ತ್ತದೆ. ನೀವು ಕೂಡ ಇಲ್ಲಿಗೆ ಬರಬಹುದು. ಎಲ್ಲ ಟೂರಿಸ್ಟ್‌ಗಳನ್ನೂ ನಾವು ಸ್ವಾಗತಿಸು ತ್ತೇವೆ’ ಎಂದು ಹೇಳಿದ್ದಾರೆ.

ಮಹಾ ಅಸೆಂಬ್ಲಿಯಲ್ಲಿ ಶಿವಸೇನೆ ಶಾಸಕರ ಸಂಖ್ಯಾಬಲ ಕುಗ್ಗಿರುವುದು ನಿಜ. ಆದರೆ ವಿಶ್ವಾಸಮತ ಯಾಚನೆ ವೇಳೆ ಬಂಡಾಯ ಶಾಸಕರು ಎಂವಿಎ ಸರಕಾರಕ್ಕೆ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದೆ. ಯಾವ ಕ್ಷಣದಲ್ಲಾದರೂ ಅಂಕಿಸಂಖ್ಯೆ ಬದಲಾಗಬಹುದು.
-ಸಂಜಯ್‌ ರಾವತ್‌, ಶಿವಸೇನೆ ಸಂಸದ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.