ಇತ್ತಂಡಗಳಿಗೂ ಬಾಳಾ ಬೇಕು: ಬಾಳಾ ಠಾಕ್ರೆ ಉತ್ತರಾಧಿಕಾರಿತ್ವಕ್ಕೆ ಇಬ್ಬಣಗಳ ಗುದ್ದಾಟ

ಭಿನ್ನ ಸಚಿವರನ್ನು ಕೈಬಿಡಲು ಶಿವಸೇನೆ ಸಭೆಯಲ್ಲಿ ನಿರ್ಧಾರ

Team Udayavani, Jun 26, 2022, 7:20 AM IST

ಇತ್ತಂಡಗಳಿಗೂ ಬಾಳಾ ಬೇಕು: ಬಾಳಾ ಠಾಕ್ರೆ ಉತ್ತರಾಧಿಕಾರಿತ್ವಕ್ಕೆ ಇಬ್ಬಣಗಳ ಗುದ್ದಾಟ

ಮುಂಬಯಿ/ಗುವಾಹಟಿ: ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರಕಾರ ಪತನಗೊಳ್ಳಲಿರುವುದರ ಜತೆಗೆ ಶಿವಸೇನೆ ಕೂಡ ಎರಡು ಹೋಳಾಗುವುದು ಖಚಿತವಾಗಿದೆ. ಇದಕ್ಕೆ ಪೂರಕವಾಗಿ ಎರಡೂ ಕಡೆಯವರು ತಾವೇ ಬಾಳಾ ಠಾಕ್ರೆಯವರ ಉತ್ತರಾಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.

ಏಕನಾಥ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಮ್ಮ ಗುಂಪಿಗೆ “ಶಿವಸೇನೆ ಬಾಳಾ ಸಾಹೇಬ್‌’ ಎಂದು ಹೆಸರು ಇರಿಸಿ ಕೊಳ್ಳುವುದಾಗಿ ಘೋಷಿಸಿದ್ದಾರೆ. ಆದರೆ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಸಂಸ್ಥಾಪಕ ಬಾಳಾ ಸಾಹೇಬ್‌ ಠಾಕ್ರೆ ಅವರ ಹೆಸರನ್ನು ಇನ್ನು ಯಾವುದೇ ಪಕ್ಷ ಬಳಕೆ ಮಾಡಬಾರದೆಂದು ತಾಕೀತು ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

ಶಿವಸೇನೆ ಎನ್ನುವುದು ಬಾಳಾ ಸಾಹೇಬ್‌ ಠಾಕ್ರೆ ಅವರಿಗೆ ಮೀಸಲಾಗಿ ಇರು ವಂಥದ್ದು. ನಮ್ಮ ಪಕ್ಷ ಅವರು ಹಾಕಿಕೊಟ್ಟ ಕಠೊರ ಹಿಂದುತ್ವದ ದಾರಿಯಲ್ಲಿಯೇ ಮುನ್ನಡೆಯಲಿದೆ. ಜತೆಗೆ ಮರಾಠಿಗರ ಆತ್ಮಾಭಿಮಾನ ರಕ್ಷಣೆಯಲ್ಲಿ ಮುಂದುವರಿಯಲಿದೆ ಎಂದು ಸಭೆಯ ಬಳಿಕ ಪಕ್ಷದ ಸಂಸದ ಸಂಜಯ ರಾವತ್‌ ಹೇಳಿದ್ದಾರೆ.

ಇನ್ನೊಂದೆಡೆ ಮುಂಬಯಿಯಲ್ಲಿ ನಡೆದ ಶಿವಸೇನೆಯ ರಾಷ್ಟ್ರೀಯ ಕಾರ್ಯ ಕಾರಿಣಿಯಲ್ಲಿ ಭಿನ್ನಮತೀಯ ಶಾಸಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವ ಎಲ್ಲ ಅಧಿಕಾರವನ್ನೂ ಸಿಎಂ ಉದ್ಧವ್‌ ಠಾಕ್ರೆ ಅವರಿಗೆ ನೀಡಲಾಗಿದೆ. ಏಕನಾಥ ಶಿಂಧೆ ಜತೆಗೆ ಗುರುತಿಸಿಕೊಂಡಿರುವ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಚಿಂತನೆ ನಡೆದಿದೆ.

ಭಿನ್ನಮತೀಯ ಶಾಸಕರಿಗೆ ನೀಡಲಾಗಿ ರುವ ಭದ್ರತೆಯನ್ನು ವಾಪಸ್‌ ಪಡೆದಿರು ವುದು ವಿವಾದಕ್ಕೆ ಕಾರಣವಾಗಿದೆ. ಕೆಲವು ಶಾಸಕರ ಕಚೇರಿಗೆ ನುಗ್ಗಿ ದಾಂಧಲೆಯನ್ನೂ ನಡೆಸಲಾಗಿದೆ.

ದಾಂಧಲೆ
ಶಿವಸೇನೆಯ ಕಾರ್ಯಕರ್ತರು ಬಂಡಾಯ ಶಾಸಕರಲ್ಲಿ ಒಬ್ಬರಾಗಿರುವ ತಾನಾಜಿ ಸಾವಂತ್‌ ಅವರಿಗೆ ಸೇರಿದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಇದರ ಜತೆಗೆ ಕಲ್ಯಾಣ್‌ ಕ್ಷೇತ್ರದ ಸಂಸದ ಮತ್ತು ಏಕನಾಥ ಶಿಂಧೆಯವರ ಪುತ್ರ ಡಾ| ಶ್ರೀಕಾಂತ ಶಿಂಧೆ ಅವರ ಕಚೇರಿಗಳಿಗೆ ನುಗ್ಗಿ ವಸ್ತುಗಳನ್ನೆಲ್ಲ ಧ್ವಂಸ ಮಾಡಲಾಗಿದೆ. ಪುಣೆ, ನಾಶಿಕ್‌, ಕೊಲ್ಹಾಪುರ, ಪರ್ಬನಿಗಳಲ್ಲಿಯೂ ಇಂಥ ಘಟನೆಗಳು ನಡೆದಿವೆ. ಅದಕ್ಕೆ ಪೂರಕವಾಗಿ ಭಿನ್ನಮತೀಯ ಶಾಸಕರಿಗೆ ನೀಡಲಾಗಿರುವ ಭದ್ರತೆಯನ್ನು ಸರಕಾರ ವಾಪಸ್‌ ಪಡೆದಿದೆ ಎಂದು ಸಚಿವ ಏಕನಾಥ ಶಿಂಧೆ ದೂರಿದ್ದಾರೆ. ಆದರೆ ರಾಜ್ಯ ಸರಕಾರ ಈ ಆರೋಪವನ್ನು ತಿರಸ್ಕರಿಸಿದೆ.

ಪಕ್ಷ ತ್ಯಜಿಸಿಲ್ಲ
ಭಿನ್ನಮತೀಯ ಶಾಸಕರು ಶಿವಸೇನೆ ಯನ್ನೇನೂ ತ್ಯಜಿಸಿಲ್ಲ. ನಮ್ಮ ಸಿಟ್ಟು ಏನಿದ್ದರೂ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆಗಿನ ಮೈತ್ರಿಯ ವಿರುದ್ಧ ಮಾತ್ರ ಎಂದು ಶಿಂಧೆ ಬಣದ ವಕ್ತಾರ ಶಾಸಕ ದೀಪಕ್‌ ಕೇಸ್ಕರ್‌ ಹೇಳಿದ್ದಾರೆ. “ನಮ್ಮ ಗುಂಪಿಗೇ ಮೂರನೇ ಎರಡರಷ್ಟು ಬಹುಮತ ಇದೆ. ಹೀಗಾಗಿ ನಮ್ಮ ಗುಂಪು ನಿಜವಾದ ಶಿವಸೇನೆ’ ಎಂದು ಅವರು ಹೇಳಿದ್ದಾರೆ. ಮುಂಬಯಿಗೆ ಬರುವುದು ಸುರಕ್ಷಿತವಲ್ಲ ಎಂಬ ಕಾರಣ ಕ್ಕಾಗಿ ಗುವಾಹಾಟಿಯಲ್ಲಿದ್ದೇವೆ. ವಿಧಾನಸಭೆ ಯಲ್ಲಿ ನಮ್ಮ ಬಣ ಬಹುಮತ ಸಾಬೀತು ಮಾಡಲಿದೆ ಎಂದು ಕೇಸ್ಕರ್‌ ಹೇಳಿದ್ದಾರೆ.

16 ಶಾಸಕರಿಗೆ ನೋಟಿಸ್‌
ಸಚಿವ ಏಕನಾಥ ಶಿಂಧೆಯವರ ಜತೆಗೆ ಇರುವ 52 ಶಾಸಕರ ಪೈಕಿ 16 ಮಂದಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸಭಾಧ್ಯಕ್ಷ ನರಹರಿ ಝಿರ್ವಾಡಿ ನೋಟಿಸ್‌ ನೀಡಿದ್ದಾರೆ. ಅವರನ್ನು ಅನರ್ಹ ಗೊಳಿಸಬೇಕು ಎಂದು ಶಿವಸೇನೆಯ ಮುಖ್ಯ ಸಚೇತಕ ಸುನೀಲ್‌ ಪ್ರಭು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಅವಿಶ್ವಾಸ ಪ್ರಸ್ತಾವ ತಿರಸ್ಕೃತ
ಇನ್ನೊಂದೆಡೆ ಭಿನ್ನಮತೀಯ ನಾಯಕ ಶಿಂಧೆ ಬಣದ ಶಾಸಕರು ಉಪ ಸಭಾಧ್ಯಕ್ಷ ನರಹರಿ ಝಿರ್ವಾಡಿ ವಿರುದ್ಧ ಸಲ್ಲಿಸಿದ್ದ ಅವಿಶ್ವಾಸ ಗೊತ್ತುವಳಿ ಪ್ರಸ್ತಾವ ತಿರಸ್ಕೃತಗೊಂಡಿದೆ.

ಗುಜರಾತ್‌ನಲ್ಲಿ ಬಿಜೆಪಿ ನಾಯಕರ ಭೇಟಿ?
ಭಿನ್ನಮತೀಯರ ನಾಯಕ ಏಕನಾಥ ಶಿಂಧೆ ಗುರುವಾರ ರಾತ್ರಿ ವಡೋದರಾಕ್ಕೆ ಭೇಟಿ ನೀಡಿದ್ದಾರೆ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫ‌ಡ್ನವೀಸ್‌ ಜತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗುವಾಹಾಟಿಯಿಂದ ವಿಶೇಷ ವಿಮಾನದಲ್ಲಿ ಅವರು ಆಗಮಿಸಿದ್ದರು ಎನ್ನಲಾಗಿದೆ. ಮಾತುಕತೆ ವೇಳೆ ಇಬ್ಬರು ನಾಯಕರು ಸರಕಾರ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಬಗ್ಗೆ ಕೆಲವು ಸುದ್ದಿವಾಹಿನಿಗಳು ವರದಿ ಮಾಡಿವೆ.

ಬಾಳಾ ಸಾಹೇಬ್‌ ಠಾಕ್ರೆ ಮತ್ತು ಶಿವಸೇನೆ ಒಂದೇ ನಾಣ್ಯದ ಎರಡು ಮುಖಗಳು. ಶಿವಸೇನೆ ವಿನಾ ಮತ್ತೆ ಯಾರಿಗೂ ಆ ಹೆಸರು ಬಳಕೆ ಮಾಡುವ ಅವಕಾಶ ಇಲ್ಲ.
-ಸಂಜಯ ರಾವತ್‌, ಶಿವಸೇನೆ ವಕ್ತಾರ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.