ಮಹಾಬಲದ ಜಟಾಪಟಿ: 9 ಬಂಡಾಯ ಸಚಿವರ ಖಾತೆಗಳು ವಜಾ

ಶಿಂಧೆ ಮತ್ತು ಬೆಂಬಲಿಗರಿಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ ; ಮಹಾರಾಷ್ಟ್ರದಲ್ಲಿ ಹೆಚ್ಚಿದ ರಾಜಕೀಯ ಉದ್ವಿಗ್ನತೆ

Team Udayavani, Jun 27, 2022, 4:46 PM IST

Uddhav

ಮುಂಬಯಿ: ಗುವಾಹಟಿಯಲ್ಲಿ ಬೀಡುಬಿಟ್ಟಿರುವ 9 ಬಂಡಾಯ ಸಚಿವರ ಖಾತೆಗಳನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ವಜಾಗೊಳಿಸಿದ್ದಾರೆ. ಈ ಸಚಿವರ ಖಾತೆಗಳನ್ನು ಸಂಪುಟದಲ್ಲಿರುವ ಇತರ ಸಚಿವರಿಗೆ ಆಡಳಿತವನ್ನು ಸುಲಭಗೊಳಿಸಲು ಹಸ್ತಾಂತರಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ನಂತರ, ಶಿವಸೇನೆಯು ಈಗ ಸಿಎಂ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಅನಿಲ್ ಪರಬ್ ಮತ್ತು ಸುಭಾಷ್ ದೇಸಾಯಿ ಸೇರಿದಂತೆ ನಾಲ್ಕು ಕ್ಯಾಬಿನೆಟ್ ಮಂತ್ರಿಗಳನ್ನು ಹೊಂದಿದೆ. ಆದಿತ್ಯ ಠಾಕ್ರೆ ಹೊರತುಪಡಿಸಿ ಉಳಿದ ಮೂವರು ಎಂಎಲ್‌ಸಿಗಳಾಗಿದ್ದಾರೆ.

ಇದನ್ನೂ ಓದಿ : ಬಂಡಾಯ ಶಾಸಕರ ಮನವಿ : ಮಹಾ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

39 ಬಂಡಾಯ ಶಿವಸೇನೆ ಶಾಸಕರು ಮತ್ತು ಅವರ ಕುಟುಂಬ ಸದಸ್ಯರ ಜೀವ, ಸ್ವಾತಂತ್ರ್ಯ ಮತ್ತು ಆಸ್ತಿಯನ್ನು ರಕ್ಷಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಬಂಡಾಯ ಶಾಸಕರು ತಂಗಿರುವ ಗುವಾಹಟಿ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಸೋಮವಾರ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

“ಇಲ್ಲಿಂದ ಓಡಿಹೋಗಿ ಬಂಡಾಯವೆದ್ದವರು, ಇಲ್ಲೇ ಹೋರಾಟ ಮಾಡಬೇಕಿತ್ತು. ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸಬೇಕಿತ್ತು. ಸದನದಲ್ಲಿ ಬಹುಮತ ಪರೀಕ್ಷೆ ವೇಳೆ ನನ್ನ ಮುಂದೆ ಕುಳಿತಾಗ, ನನ್ನನ್ನು ನೋಡಿ. ಕಣ್ಣಲ್ಲಿ ಕಣ್ಣಿಟ್ಟು ನಾವೇನು ​​ತಪ್ಪು ಮಾಡಿದೆವು ಎಂದು ಹೇಳಿ,” ಎಂದು ಆದಿತ್ಯ ಠಾಕ್ರೆ ಬಂಡಾಯ ಶಾಸಕರನ್ನು ಪ್ರಶ್ನಿಸಿದ್ದಾರೆ.

ಬಂಡಾಯ ಶಿವಸೇನೆ ಶಾಸಕರಿಗೆ ಸುಪ್ರೀಂ ಕೋರ್ಟ್ ಜುಲೈ 11 ರವರೆಗೆ ರಿಲೀಫ್ ನೀಡಿದ್ದು, ಅವರ ಅನರ್ಹತೆಯ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ.

ಶಿಂಧೆ ನೇತೃತ್ವದ ಗುಂಪಿನೊಂದಿಗೆ ಬೀಡುಬಿಟ್ಟಿರುವ ಸಚಿವ ರಾಜೇಂದ್ರ ಪಾಟೀಲ್-ಯಾದವ್ಕರ್ ಬೆಂಬಲಿಗರು ಮತ್ತು ಸೇನಾ ಕಾರ್ಯಕರ್ತರು ಕೊಲ್ಲಾಪುರದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಘರ್ಷಣೆಯನ್ನು ತಪ್ಪಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಗುವಾಹಟಿ ಹೋಟೆಲ್‌ನಲ್ಲಿ ಬಂಡಾಯ ಶಾಸಕರನ್ನು ಭೇಟಿ ಮಾಡಲು ಮುಂದಾದ ಮಣಿಪುರ ಶಿವಸೇನೆ ಮುಖ್ಯಸ್ಥರನ್ನು ತಡೆದು ನಿಲ್ಲಿಸಲಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.