ಪ್ರಹಾರ್ ಜನಶಕ್ತಿ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ
Team Udayavani, Feb 22, 2020, 6:15 PM IST
ಸಾಂದರ್ಭಿಕ ಚಿತ್ರ..
ಅಕೋಲಾ: ಜಿಲ್ಲೆಯ ಅಕೋಟ್ ಪಟ್ಟಣದಲ್ಲಿ ಪ್ರಹಾರ್ ಜನಶಕ್ತಿ ಪಕ್ಷದ(ಪಿಜೆಪಿ) ಸ್ಥಳೀಯ ಮುಖಂಡರೊಬ್ಬರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಗೈದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪಿಜೆಪಿಯ ಅಕೋಲಾ ಜಿಲ್ಲಾ ಘಟಕದ ಮಾಜಿ ಮುಖ್ಯಸ್ಥರಾಗಿದ್ದ ತುಷಾರ್ ಪುಂಡ್ಕರ್ ಅವರಿಗೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಂಡು ಹಾರಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಅಕೋಲಾದ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಅಕೋಟ್ನ ಪೊಲೀಸ್ ಕಾಲೋನಿ ಪ್ರದೇಶದಲ್ಲಿ ಪುಂಡ್ಕರ್ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಿಂದಿನಿಂದ ಎರಡು ಗುಂಡುಗಳನ್ನು ಹಾರಿಸಿದರು. ದೇಹಕ್ಕೆ ಗುಂಡು ತಗಲಿ ಪುಂಡ್ಕರ್ ನೆಲದ ಮೇಲೆ ಕುಸಿದುಬಿದ್ದರು. ಕೆಲವು ಸ್ಥಳೀಯ ನಿವಾಸಿಗರು ಎಚ್ಚರಿಸಿದ ಅನಂತರ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪುಂಡ್ಕರ್ ಅವರನ್ನು ಪಟ್ಟಣದ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು.
ಅನಂತರ ಅವರನ್ನು ಅಕೋಲಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳದಿಂದ ಬಂದೂಕು ಮತ್ತು ಎರಡು ಖಾಲಿ ಕಾಟ್ರಿìಡ್ಜ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪುಂಡ್ಕರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಅಕೋಲಾ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹತ್ಯೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದರು.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪಿಜೆಪಿ ಸಂಸ್ಥಾಪಕ ಅಧ್ಯಕ್ಷ ಮತ್ತು ಅಚಲಪುರ ಶಾಸಕ ಬಚ್ಚಾ ಕಡೂ ಅವರು, ಅಪರಾಧದ ಹಿಂದಿನ ದುಷ್ಕರ್ಮಿಗಳ ವಿರುದ್ಧ ತತ್ಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಅಪರಾಧದ ದುಷ್ಕರ್ಮಿಗಳು ಮತ್ತು ಕೊಲೆಗೆ ಸುಪಾರಿ ನೀಡಿದ ಜನರನ್ನು ಪತ್ತೆಹಚ್ಚುವುದು ಬಹಳ ಮುಖ್ಯವಾಗಿದೆ ಎಂದವರು ನುಡಿದಿದ್ದಾರೆ.
ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅಕೋಲಾ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕಡೂ ಹೇಳಿದ್ದಾರೆ. 2019ರ ಅಕ್ಟೋಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪುಂಡ್ಕರ್ ಪಿಜೆಪಿಯ ಟಿಕೆಟ್ನಲ್ಲಿ ಅಕೋಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?