ಬಿಕ್ಕಟ್ಟು ಮುಂದುವರಿಕೆ; ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಶಿವಸೇನಾದಲ್ಲಿಯೇ ಈಗ ಎರಡು ಬಣ!
Team Udayavani, Nov 7, 2019, 9:52 AM IST
ನವದೆಹಲಿ:ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ಕುರಿತ ಬಿಜೆಪಿ-ಶಿವಸೇನಾ ನಡುವಿನ ಬಿಕ್ಕಟ್ಟು ಮುಂದುವರೆದಿರುವ ನಡುವೆ ಇದೀಗ ಸರ್ಕಾರ ರಚನೆ ವಿಚಾರದಲ್ಲಿ ಶಿವಸೇನಾದಲ್ಲಿಯೇ ಎರಡು ಗುಂಪುಗಳಾಗಿರುವುದಾಗಿ ವರದಿ ತಿಳಿಸಿದೆ.
ಶಿವಸೇನಾದ ಒಂದು ಶಾಸಕರ ಗುಂಪು ಈ ಬಿಕ್ಕಟ್ಟನ್ನು ಕೂಡಲೇ ಕೊನೆಗೊಳಿಸುವ ಬಗ್ಗೆ ಒಲವು ತೋರಿದ್ದರೆ, ಉಳಿದ ಮತ್ತೊಂದು ಶಾಸಕರ ಗುಂಪು ಬಿಜೆಪಿ ಜತೆ ಸರ್ಕಾರ ರಚನೆಗೆ 50;50 ಸೂತ್ರಕ್ಕೆ ಅಂಟಿಕೊಂಡಿರುವುದಾಗಿ ಮೂಲಗಳು ಹೇಳಿವೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಮತ್ತು ಬಿಜೆಪಿ ಮೈತ್ರಿಯಲ್ಲಿ ಸ್ಪರ್ಧಿಸಿದ್ದವು. ಎರಡು ಪಕ್ಷಗಳೂ ಮೈತ್ರಿ ಜತೆ ಸೀಟು ಹಂಚಿಕೆ ಮಾಡಿಕೊಂಡು ಕಣಕ್ಕಿಳಿದಿದ್ದವು. ಇದೀಗ ಸಿಎಂ ಹುದ್ದೆ ಶಿವಸೇನಾ ಮತ್ತು ಬಿಜೆಪಿಗೆ 50:50 ಸೂತ್ರದಲ್ಲಿ ಹಂಚಿಕೆಯಾಗಬೇಕೆಂದು ಶಿವಸೇನಾ ಪಟ್ಟು ಹಿಡಿದಿರುವುದು ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿಯಲು ಕಾರಣವಾಗಿದೆ.
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಯಲ್ಲಿ ಬಿಜೆಪಿಯದ್ದೇ ಮಹತ್ವದ ಪಾತ್ರ, ಅಲ್ಲದೇ ದೇವೇಂದ್ರ ಫಡ್ನವೀಸ್ ಅವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಬಿಜೆಪಿ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ