ಟಿವಿ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಅತ್ತೆಯ ಬೆರಳುಗಳನ್ನು ಕಚ್ಚಿದ ಸೊಸೆ!
ಅತ್ತೆ, ಸೊಸೆ ಜಗಳ ಬಿಡಿಸಲು ಬಂದ ಗಂಡನಿಗೂ ಕಪಾಳಮೋಕ್ಷ
Team Udayavani, Sep 7, 2022, 3:19 PM IST
ಥಾಣೆ: ಏರು ಧ್ವನಿಯಲ್ಲಿ ಟಿವಿ ನೋಡುತ್ತಿದ್ದ ವೇಳೆ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ್ದಕ್ಕೆ ಸೊಸೆ ಕೋಪಗೊಂಡು ಅತ್ತೆಯ ಬೆರಳುಗಳನ್ನು ಕಚ್ಚಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ನಲ್ಲಿ ನಡೆದಿದೆ.
ಅತ್ತೆ ವೃಶಾಲಿ ಕುಲಕರ್ಣಿ (60) ಅವರು ಮನೆಯಲ್ಲಿ ಭಜನೆ ಪಠಿಸುತ್ತಿದ್ದಾಗ ಅವರ ಸೊಸೆ ವಿಜಯಾ ಕುಲಕರ್ಣಿ ಟಿವಿ ವೀಕ್ಷಿಸುತ್ತಿದ್ದರು. ಈ ವೇಳೆ ಅತ್ತೆ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ್ದಾರೆ. ಆದರೆ ವಿಜಯಾ ವಾಲ್ಯೂಮ್ ಕಡಿಮೆ ಮಾಡಿಲ್ಲ. ಬಳಿಕ ವೃಶಾಲಿ ಅವರು ಟಿವಿ ಆಫ್ ಮಾಡಿದ್ದಾರೆ. ಇದರಿಂದ ಕೋಪಕೊಂಡ ವಿಜಯಾ, ವೃಶಾಲಿ ಅವರ ಮೂರು ಬೆರಳುಗಳನ್ನು ಕಚ್ಚಿದ್ದಾರೆ. ಮಧ್ಯಪ್ರವೇಶಿಸಲು ಯತ್ನಿಸಿದ ಗಂಡನಿಗೂ ಕಪಾಳಮೋಕ್ಷ ಮಾಡಿದ್ದಾರೆ ಎಂದು ಶಿವಾಜಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳು ವೃಶಾಲಿ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವಿಜಯಾ ಕುಲಕರ್ಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ದೆಹಲಿ: 2023ರ ಜನವರಿ 1ರವರೆಗೆ ಪಟಾಕಿ, ಸಿಡಿಮದ್ದು ಆನ್ ಲೈನ್ ಮಾರಾಟ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?