3 ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳತಿಯನ್ನೇ ಕೊಂದು ಚಾಪೆಯಲ್ಲಿ ಸುತ್ತಿಟ್ಟ ಪ್ರಿಯತಮ
Team Udayavani, Feb 15, 2023, 4:39 PM IST
ಮುಂಬೈ: ಕಳೆದ ಮೂರು ವರ್ಷಗಳಿಂದ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿ ಜೊತೆಗಿದ್ದ ಪ್ರೇಯಸಿಯನ್ನೇ ಕೊಂದು ದೇಹವನ್ನು ಮನೆಯ ಕೋಣೆಯಲ್ಲಿ ಚಾಪೆಯಲ್ಲಿ ಸುತ್ತಿಟ್ಟ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಹಾರ್ದಿಕ್ ಶಾ ಕೊಲೆಗೈದ ಆರೋಪಿ ಮೇಘಾ ಮೃತ ದುರ್ದೈವಿಯಾಗಿದ್ದಾಳೆ.
ಅಸಲಿಗೆ ಹಾರ್ದಿಕ್ ಮತ್ತು ಮೇಘಾ ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು ಒಟ್ಟಿಗೆ ಒಂದೇ ರೂಮ್ ನಲ್ಲಿ ವಾಸವಾಗಿದ್ದರು ಆದರೆ ಹಾರ್ದಿಕ್ ಸದ್ಯ ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದ ಎನ್ನಲಾಗಿದೆ, ಮೇಘಾ ಮುಂಬೈಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಇವರಿಬ್ಬರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದು ಆಗಾಗ ಜಗಳಗಳು ನಡೆಯುತ್ತಿದ್ದವು ಎಂದು ಹೇಳಲಾಗುತ್ತಿತ್ತು. ಆದರೆ ಇಬ್ಬರ ನಡುವೆ ಅದೇನೋ ವೈಮನಸ್ಸು ಉಂಟಾಗಿ ಹಾರ್ದಿಕ್ ಮೇಘಾಳನ್ನು ಕೊಲೆಗೈದಿದ್ದಾನೆ ಅಷ್ಟು ಮಾತ್ರವಲ್ಲದೆ ಮೇಘಾಳ ಮೃತದೇಹವನ್ನು ತನ್ನ ರೂಮಿನಲ್ಲಿರುವ ಚಾಪೆಯಲ್ಲಿ ಸುತ್ತಿ ಇಟ್ಟಿದ್ದಾನೆ.
ಮೇಘಾನನ್ನು ಕೊಂದ ನಂತರ ಹಾರ್ದಿಕ್ ಮನೆಯ ಕೆಲ ವಸ್ತುಗಳನ್ನು ಮಾರಿ ಹಣದೊಂದಿಗೆ ಪರಾರಿಯಾಗಿದ್ದ. ಈತ ರೈಲಿನಲ್ಲಿ ಪರಾರಿಯಾಗುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಸ್ಥಳವನ್ನು ಪತ್ತೆ ಹಚ್ಚಿ ಮಧ್ಯಪ್ರದೇಶದ ನಗ್ಡಾದಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಹಾರ್ದಿಕ್ ಮತ್ತು ಮೇಘಾ ಕಳೆದ ಆರು ತಿಂಗಳಿಂದ ಒಟ್ಟಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸದ್ಯ ಆರೋಪಿ ಪೋಲೀಸರ ವಶದಲ್ಲಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಬೆಂಕಿ ಮಳೆ ಸುರಿದ್ರೂ ಏನೂ ಆಗಲ್ಲ!: ವಿನೂತನ ಜೀವರಕ್ಷಕ ಜಾಕೆಟ್ ಅಭಿವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?