Maharashtra Politics; ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ
ಮಹಾ ಬದಲಾವಣೆ.!!!, ಪ್ರಮುಖ ಎನ್ಸಿಪಿ ನಾಯಕರು ಸಚಿವರಾಗಿ ಪ್ರಮಾಣವಚನ...
Team Udayavani, Jul 2, 2023, 2:47 PM IST
ಮುಂಬಯಿ : ಮಹತ್ವದ ರಾಜಕೀಯದ ವಿದ್ಯಮಾನದಲ್ಲಿ ಬಿಜೆಪಿ ಮತ್ತು ಶಿವಸೇನೆ ಶಿಂಧೆ ಬಣದ ಮೈತ್ರಿಕೂಟಕ್ಕೆ ಹೊಸ ಬಲ ಎಂಬಂತೆ ಎನ್ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಜಿತ್ ಅವರೊಂದಿಗೆ ಇತರ ಎಂಟು ಎನ್ ಸಿಪಿ ಶಾಸಕರಾದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್ಸಿಪಿ ನಾಯಕ ಛಗನ್ ಭುಜಬಲ್, ಧರ್ಮೋಬಾಬಾ ಅತ್ರಮ್, ಹಸನ್ ಮುಶ್ರೀಫ್, ಧನಂಜಯ್ ಮುಂಡೆ, ಅದಿತಿ ತತ್ಕರೆ, ಅನಿಲ್ ಪಾಟೀಲ್, ಸಂಜಯ್ ಭನ್ಸೋಡೆ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್ ಪವಾರ್ ಅವರೊಂದಿಗೆ 53 ಎನ್ಸಿಪಿ ಶಾಸಕರ ಪೈಕಿ 30 ಶಾಸಕರು ರಾಜ್ಯ ಇದ್ದಾರೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಸಚಿವ ಸುಧೀರ್ ಮುಂಗಂತಿವಾರ್ ಪ್ರತಿಕ್ರಿಯಿಸಿ “40 ಕ್ಕೂ ಹೆಚ್ಚು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ, ಬಹುತೇಕ ಸಂಪೂರ್ಣ ಎನ್ಸಿಪಿ ಎನ್ ಡಿಎ ಸೇರಲಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಪ್ರತಿಕ್ರಿಯಿಸಿ “ಅಜಿತ್ ಪವಾರ್ ಮತ್ತು ಇತರ ಎನ್ಸಿಪಿ ಶಾಸಕರು ಇಲ್ಲಿಗೆ ಬಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹಾರಾಷ್ಟ್ರ ಪ್ರಗತಿ ಸಾಧಿಸಲಿದೆ” ಎಂದಿದ್ದಾರೆ.
2019 ರಲ್ಲೂ ಅಜಿತ್ ಪವಾರ್ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ವಿಫಲ ಪ್ರಯತ್ನವನ್ನು ಮಾಡಿದ್ದರು. ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್, ಎನ್ಸಿಪಿಯಲ್ಲಿ ಕ್ಷೀಣಿಸುತ್ತಿದ್ದ ತನ್ನ ಸ್ಥಾನಮಾನವನ್ನು ಪುನರುತ್ಥಾನಗೊಳಿಸಲು ಮುಂದಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಪಕ್ಷದ ಯಾವುದೇ ಹುದ್ದೆಯನ್ನು ಹೊಂದಿಲ್ಲದಿದ್ದರೂ, ಸುಪ್ರಿಯಾ ಸುಳೆ ಮತ್ತು ಪಕ್ಷದ ನಾಯಕ ಪ್ರಫುಲ್ ಪಟೇಲ್ ಅವರನ್ನು ಜೂನ್ 10 ರಂದು ಎನ್ಸಿಪಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು