ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹುದ್ದೆ: ಶಿವಸೇನೆ ನಾಯಕರು ರೇಸ್‌ನಲ್ಲಿ


Team Udayavani, Jun 14, 2019, 11:28 AM IST

shivsena

ಏಕನಾಥ ಶಿಂಧೆ,ಸುಭಾಷ್‌ ದೇಸಾಯಿ

ಮುಂಬಯಿ: ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಯು ತನ್ನ ಮಿತ್ರಪಕ್ಷ ಶಿವಸೇನೆಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲು ಇಂಗಿತ ವ್ಯಕ್ತಪಡಿಸಿರುವುದರೊಂದಿಗೆ ಶಿವಸೇನೆಯ ಹಲವು ಪ್ರಮುಖ ನಾಯಕರ ನಡುವೆ ಆ ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ರೇಸ್‌ ಆರಂಭವಾಗಿದೆ. ಈ ವಿಷಯದಲ್ಲಿ ಇದೀಗ ಎಲ್ಲರ ಕಣ್ಣು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ ಮೇಲಿದ್ದು, ಪಕ್ಷದಲ್ಲಿ ಯಾರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂಬ ಬಗ್ಗೆ ಅಂತಿಮ ನಿರ್ಣಯವನ್ನು ಉದ್ಧವ್‌ ಠಾಕ್ರೆ ಅವರು ತೆಗೆದುಕೊಳ್ಳಲಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಪಕ್ಷದ ಹಿರಿಯ ಸಚಿವ ಸುಭಾಷ್‌ ದೇಸಾಯಿ ಅವರು ಮುಂಚೂಣಿಯಲ್ಲಿದ್ದಾರೆ. ಆದರೆ ಅವರ ಹೆಸರನ್ನು ಹಲವು ಶಾಸಕರು ಮತ್ತು ನಾಯಕರು ವಿರೋಧಿಸುತ್ತಿದ್ದಾರೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರೂ ದೇಸಾಯಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ನೀಡಿ ಕೈಗಾರಿಕೆಯಂತಹ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ. ದೇಸಾಯಿ ಅವರು ಠಾಕ್ರೆ ಕುಟುಂಬದ ನಿಕಟವರ್ತಿಯಾಗಿರುವ ಕಾರಣ ಚೆಂಡು ಅವರ ಮೈದಾನಕ್ಕೆ ಬೀಳುವ ಸಾಧ್ಯತೆ ಹೆಚ್ಚಿದೆ.

ಆದರೆ, ಈ ಲೆಕ್ಕಾಚಾರವನ್ನು ಪಕ್ಷದ ಇನ್ನೋರ್ವ ಹಿರಿಯ ಸಚಿವ ಏಕನಾಥ ಶಿಂಧೆ ಅವರು ಬಿಗಡಾಯಿಸಲೂಬಹುದು. ಶಿಂಧೆ ಕೂಡ ಉಪ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ತಳಮಟ್ಟದಲ್ಲಿ ಉತ್ತಮ ಹಿಡಿತವನ್ನು ಹೊಂದಿರುವ ಶಿವಸೇನೆಯ ಓರ್ವ ಬಲಿಷ್ಠ ನಾಯಕರಾಗಿರುವ ಶಿಂಧೆ ಅವರು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಥಾಣೆ ಮತ್ತು ಪಾಲ^ರ್‌ ಜಿಲ್ಲೆಗಳ ಎಲ್ಲಾ ನಾಲ್ಕು ಲೋಕಸಭಾ ಸ್ಥಾನಗಳಲ್ಲಿ ಪಕ್ಷಕ್ಕೆ ಗೆಲುವು ಖಚಿತಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 2014ರಲ್ಲಿ ರಾಜ್ಯದಲ್ಲಿ ಬಿಜೆಪಿಯು ತನ್ನ ಸ್ವಂತ ಬಲದ ಮೇಲೆ ಸರಕಾರವನ್ನು ರಚಿಸಿದಾಗ, ಏಕನಾಥ್‌ ಶಿಂಧೆ ವಿಪಕ್ಷ ನಾಯಕರಾಗಿದ್ದರು. ಆದರೆ, ಅನಂತರ ಶಿವಸೇನೆಯು ಬಿಜೆಪಿಯೊಂದಿಗೆ ಸರಕಾರದಲ್ಲಿ ಸೇರ್ಪಡೆಗೊಂಡಿತು. ಫಡ್ನವೀಸ್‌ ಸರಕಾರದ ಮೇಲೆ ಬಲವಾದ ನಂಬಿಕೆಯನ್ನು ಹೊಂದಿರುವ ತಳಮಟ್ಟದ ಮತದಾರರನ್ನು ಮೆಚ್ಚಿಸಲು ಶಿವಸೇನೆಯು ಉಪಮುಖ್ಯಮಂತ್ರಿ ಹುದ್ದೆ ಯನ್ನು ಬಯಸುತ್ತಿದೆ ಎನ್ನಲಾಗಿದೆ. ಇತ್ತೀಚಿನ ಲೋಕಸಭಾ ಚುನಾವಣೆಯ ಫಲಿತಾಂಶವು ಶಿವಸೇನೆಯ ಮತದಾನ ಪ್ರಮಾಣದಲ್ಲಿ ಶೇ. 4 ರಷ್ಟು ವೃದ್ಧಿಯನ್ನು ತೋರಿಸಿದೆ.

1995ರಲ್ಲಿ ರಾಜ್ಯದಲ್ಲಿ ಶಿವಸೇನೆಯು ಏಕೈಕ ಅತಿದೊಡ್ಡ ಪಕ್ಷವಾಗಿದ್ದಾಗ ಅದು ಮುಖ್ಯಮಂತ್ರಿ ಹುದ್ದೆ ಯನ್ನು ಹೊಂದಿತ್ತು ಮತ್ತು ಕಿರಿಯ ಮಿತ್ರಪಕ್ಷವಾಗಿ ಬಿಜೆಪಿ ಉಪ ಮುಖ್ಯಮಂತ್ರಿ ಹುದ್ದೆ ಯನ್ನು ಹೊಂದಿತ್ತು. ಇದೀಗ ಶಿವಸೇನೆಯು 1995ರ ಈ ಮಾದರಿಯನ್ನು ಅನುಷ್ಠಾನಗೊಳಿಸಲು ಒತ್ತಾಯಿಸುತ್ತಿದೆ.

ಕ್ಯಾಬಿನೆಟ್‌ ಆಕಾಂಕ್ಷಿಗಳು
ಶಿವಸೇನೆಯೊಳಗೆ ಕ್ಯಾಬಿನೆಟ್‌ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳಿದ್ದಾರೆ. ಶಿವಸೇನೆಯ ಹಿರಿಯ ಶಾಸಕ ರಾಜೇಶ್‌ ಕ್ಷೀರ್‌ಸಾಗರ್‌ ಅವರು ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಇವರು ಕೊಲ್ಲಾಪುರ ಜಿಲ್ಲೆಯ ಇಬ್ಬರು ಶಿವಸೇನೆ ಅಭ್ಯರ್ಥಿಗಳ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇತ್ತೀಚೆಗೆ ಶಿವಸೇನೆಗೆ ಸೇರ್ಪಡೆಯಾದ ಎನ್‌ಸಿಪಿ ಶಾಸಕ ಜಯದತ್ತ ಕ್ಷೀರ್‌ಸಾಗರ್‌ ಕೂಡ ಶಿವಸೇನೆ ಕೋಟಾದಿಂದ ಕ್ಯಾಬಿನೆಟ್‌ ಸ್ಥಾನವನ್ನು ಪಡೆಯುವ ನಿರೀಕ್ಷೆಯಿದೆ. ಆದರೆ ಇವರ ಸೇರ್ಪಡೆಗೆ ಕೆಲವು ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.