ಗಾಂಧಿಗೆ ಭಾರತ ರತ್ನ; ಕೇಂದ್ರಕ್ಕೆ ಸೂಚನೆ ನೀಡಿ- ಪಿಐಎಲ್ ಗೆ ಸುಪ್ರೀಂ ಹೇಳಿದ್ದೇನು ಗೊತ್ತೆ?
ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಎಂದು ಪರಿಗಣಿಸಲಾಗಿದೆ. ದೇಶದ ಜನರು ಅತೀ ಹೆಚ್ಚಿನ ಗೌರವವನ್ನು ನೀಡಿದ್ದಾರೆ.
Team Udayavani, Jan 17, 2020, 12:23 PM IST
ನವದೆಹಲಿ: ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ಗೆ ಸಂಬಂಧಿಸಿಂತೆ ಯಾವುದೇ ಆದೇಶ ನೀಡಲು ನಿರಾಕರಿಸಿದೆ.
ಮಹಾತ್ಮ ಗಾಂಧಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ವಿಚಾರದಲ್ಲಿ ಯಾವುದೇ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ಮಹಾತ್ಮ ಗಾಂಧಿ ಭಾರತ ರತ್ನ ಪ್ರಶಸ್ತಿಗಿಂತ ಮೇರು ವ್ಯಕ್ತಿತ್ವ ಹೊಂದಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.
ಮಹಾತ್ಮ ಗಾಂಧಿಯನ್ನು ರಾಷ್ಟ್ರಪಿತ ಎಂದು ಪರಿಗಣಿಸಲಾಗಿದೆ. ದೇಶದ ಜನರು ಅತೀ ಹೆಚ್ಚಿನ ಗೌರವವನ್ನು ನೀಡಿದ್ದಾರೆ. ಹೀಗಾಗಿ ಯಾವುದೇ ಸಾಮಾನ್ಯ ಪ್ರಶಸ್ತಿ ಮೂಲಕ ಅವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.
ಈ ಹಿಂದೆಯೂ ಮಹಾತ್ಮ ಗಾಂಧಿಗೆ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಹಲವಾರು ಪಿಐಎಲ್ ಸಲ್ಲಿಕೆಯಾಗಿತ್ತು. ಆದರೆ ಅವೆಲ್ಲವೂ ತಿರಸ್ಕೃತಗೊಂಡಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ