Mahua Moitra ‘ಪ್ರಶ್ನೆಗಾಗಿ ಲಂಚ’ ಪ್ರಕರಣ: ವಿದೇಶ ಪ್ರವಾಸದ ವಿವರ ಸಂಗ್ರಹ?
Team Udayavani, Oct 27, 2023, 12:16 AM IST
ಹೊಸದಿಲ್ಲಿ: “ಪ್ರಶ್ನೆಗಾಗಿ ಲಂಚ’ ಪ್ರಕರಣ ವು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾರಿಗೆ ಮತ್ತಷ್ಟು ಸಂಕಷ್ಟ ಉಂಟು ಮಾಡಿದೆ. ಅ.31ರಂದು ವಿಚಾ ರಣೆಗೆ ಹಾಜರಾಗುವಂತೆ ಲೋಕ ಸಭೆಯ ನೀತಿ ನಿಯಮ ಸಮಿತಿ ಮಹು ವಾರಿಗೆ ಸೂಚಿಸಿದೆ. ಇದೇ ವೇಳೆ, ಮಹುವಾ ವಿರುದ್ಧದ ಆರೋಪವು ಗಂಭೀರವಾಗಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿರುವುದಾಗಿ ಸಮಿತಿ ಅಭಿಪ್ರಾಯಪಟ್ಟಿದೆ ಎನ್ನಲಾಗಿದೆ.
ಸದನದಲ್ಲಿ ಪ್ರಶ್ನೆ ಕೇಳಲು ಮಹುವಾ ಅವರು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ವಕೀಲ ಜೈ ಅನಂದ್ ದೇಹದ್ರಾಯ್ರನ್ನು ಸಮಿತಿ ವಿಚಾರಣೆ ನಡೆಸಿದೆ. ಇವರಿಬ್ಬರೂ ಮಹುವಾ ವಿರುದ್ಧ ಮೌಖೀಕ ಸಾಕ್ಷ್ಯಗಳನ್ನು ನೀಡಿ ದ್ದಾರೆ. ಯಾರನ್ನು ಮೊದಲು ವಿಚಾರ ಣೆಗೆ ಒಳಪಡಿ ಸಬೇಕು ಎಂಬ ಬಗ್ಗೆ ಆರಂಭ ದಲ್ಲಿ ಸಮಿತಿ ಸದಸ್ಯರ ನಡು ವೆಯೇ ಭಿನ್ನಾಭಿಪ್ರಾಯ ಏರ್ಪಟ್ಟಿತು. ಕೊನೆಗೆ ದೂರುದಾರರನ್ನು ಮೊದಲು ವಿಚಾರಣೆಗೆ ಒಳಪಡಿಸಲಾಯಿತು.
ಆರೋಪ ಸಂಬಂಧ ಕೇಂದ್ರ ಗೃಹ ಇಲಾಖೆ ಮತ್ತು ಐಟಿ ನೆರವು ಪಡೆಯಲು ಚಿಂತನೆ ನಡೆಸಿರುವುದಾಗಿ ಸಮಿತಿ ಮುಖ್ಯಸ್ಥ ವಿನೋದ್ ಕುಮಾರ್ ಹೇಳಿದ್ದಾರೆ. 5 ವರ್ಷಗಳಲ್ಲಿ ಮಹುವಾ ವಿದೇಶ ಪ್ರವಾಸದ ವಿವರ, ಪ್ರವಾಸಕ್ಕೂ ಮುನ್ನ ಲೋಕಸಭೆಗೆ ಮಾಹಿತಿ ನೀಡಿದ್ದರೇ, ಅನುಮತಿ ಪಡೆದಿದ್ದರೇ ಎಂಬ ಬಗ್ಗೆಯೂ ಗೃಹ ಇಲಾಖೆ ಯಿಂದ ವಿವರ ಪಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ