ಮೈನ್‌ಪುರಿ ಲೋಕಸಭಾ ಉಪಚುನಾವಣೆ ; ಡಿಂಪಲ್ ಯಾದವ್ ಪರ ಭರ್ಜರಿ ಪ್ರಚಾರ

ಸವಾಲಾಗಿ ಸ್ವೀಕರಿಸಿರುವ ಯೋಗಿ ಆದಿತ್ಯನಾಥ್ ಮತ್ತು ಅಖಿಲೇಶ್ ಯಾದವ್

Team Udayavani, Dec 4, 2022, 6:54 PM IST

1-ADSADSA

ಮೈನ್‌ಪುರಿ: ಸಮಾಜವಾದಿ ಪಕ್ಷದ ಸಂಸ್ಥಾಪಕರ ರಾಜಕೀಯ ಪರಂಪರೆ ಅಖಂಡವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಮುಲಾಯಂ ಸಿಂಗ್ ಯಾದವ್ ಅವರ ಗುರುಗಳ ಕುಟುಂಬ ಸದಸ್ಯರು ಡಿಸೆಂಬರ್ 5 ರಂದು ನಡೆಯಲಿರುವ ಮೈನ್‌ಪುರಿ ಲೋಕಸಭಾ ಉಪಚುನಾವಣೆಗೆ ಅವರ ಸೊಸೆ ಡಿಂಪಲ್ ಯಾದವ್ ಪರ ಪ್ರಚಾರ ಮಾಡುವ ಮೂಲಕ ಒಗ್ಗಟ್ಟು ತೋರಿದ್ದಾರೆ.

ಕಳೆದ ತಿಂಗಳು ಮುಲಾಯಂ ಸಿಂಗ್ ಯಾದವ್ ವಿಧಿವಶ ರಾದ ಕಾರಣ ಅಗತ್ಯವಾಗಿದ್ದ ಉಪಚುನಾವಣೆಯಲ್ಲಿ, ಡಿಂಪಲ್ ಯಾದವ್ ಅವರನ್ನು ಎಸ್‌ಪಿ, ಬಿಜೆಪಿಯ ರಘುರಾಜ್ ಸಿಂಗ್ ಶಾಕ್ಯಾ ವಿರುದ್ಧ ಕಣಕ್ಕಿಳಿಸಿದೆ.

ಮುಲಾಯಂ ಸಿಂಗ್ ಯಾದವ್ ಅವರ ಶಾಲೆಯ ಶಿಕ್ಷಕ ಉದಯ್ ಪ್ರತಾಪ್ ಸಿಂಗ್ ಮತ್ತು ಅವರ ರಾಜಕೀಯ ಗುರು ಎಂದು ಪರಿಗಣಿಸಲ್ಪಟ್ಟ ನಾಥು ಸಿಂಗ್ ಅವರ ಕುಟುಂಬ ಸದಸ್ಯರು ಎಸ್‌ಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದು, ಮುಲಾಯಂ ಐದು ಬಾರಿ ಗೆದ್ದಿರುವ ಸ್ಥಾನದಿಂದ ಸೊಸೆ ವಿಜಯಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1989 ಮತ್ತು 1991 ರಲ್ಲಿ ಮೈನ್‌ಪುರಿಯಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ತೊಂಬತ್ತೊಂದು ವರ್ಷದ ಉದಯ್ ಪ್ರತಾಪ್, ಹೆಚ್ಚಿನ ಸಂಖ್ಯೆಯ ಮತದಾರರು ಡಿಂಪಲ್ ಯಾದವ್ ಅವರನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.ಒಂದೆರಡು ದಿನಗಳ ಕಾಲ, ನಾನು ಅವರ ಪರವಾಗಿ ಈ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ ಮತ್ತು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆದರೆ, ಅವರು ಉಪಚುನಾವಣೆಯಲ್ಲಿ ಜಯಗಳಿಸುತ್ತಾರೆ” ಎಂದರು.

ಡಿಂಪಲ್ ಯಾದವ್ ಅವರ ಪತಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಎಸ್‌ಪಿಯ ಉನ್ನತ ನಾಯಕರು ಪಕ್ಷದ ಭದ್ರಕೋಟೆಯಾಗಿರುವ ಕ್ಷೇತ್ರಕ್ಕೆ ಉಪಚುನಾವಣೆಗಾಗಿ ಭರ್ಜರಿ ಪ್ರಚಾರವನ್ನು ನಡೆಸಿದ್ದಾರೆ. ನಾಥು ಸಿಂಗ್ ಅವರ ಮೊಮ್ಮಗ ನೀರಜ್ ಯಾದವ್ ನಮ್ಮ ಇಡೀ ಕುಟುಂಬವು ಮೈನ್‌ಪುರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ಡಿಂಪಲ್ ಯಾದವ್ ಪರ ಪ್ರಚಾರ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಮೈನ್‌ಪುರಿ ಸಂಸದೀಯ ಕ್ಷೇತ್ರವು ಐದು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಮೈನ್‌ಪುರಿ, ಭೋಗಾಂವ್, ಕಿಶ್ನಿ, ಕರ್ಹಾಲ್ ಮತ್ತು ಜಸ್ವಂತ್ ನಗರ. 2022 ರ ವಿಧಾನಸಭಾ ಚುನಾವಣೆಯಲ್ಲಿ, ಎಸ್ ಪಿ ಕರ್ಹಾಲ್, ಕಿಶ್ನಿ ಮತ್ತು ಜಸ್ವಂತ್ ನಗರ ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಮೈನ್‌ಪುರಿ ಮತ್ತು ಭೋಗಾಂವ್ ಸ್ಥಾನಗಳನ್ನು ಗೆದ್ದಿತ್ತು. ಅಖಿಲೇಶ್ ಯಾದವ್ ಕರ್ಹಾಲ್ ಕ್ಷೇತ್ರವನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದು, ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಜಸ್ವಂತ್ ನಗರದಿಂದ ಶಾಸಕರಾಗಿದ್ದಾರೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.