AIADMK ಮಾಜಿ ಸಂಸದ ಮೈತ್ರೇಯನ್ ಬಿಜೆಪಿ ಸೇರ್ಪಡೆ
ಎರಡು ದಶಕಗಳ ನಂತರ ಮಾತೃ ಪಕ್ಷಕ್ಕೆ ಮರಳಿದ ನಾಯಕ
Team Udayavani, Jun 9, 2023, 10:17 PM IST
ಹೊಸದಿಲ್ಲಿ: ಎಐಎಡಿಎಂಕೆಯ ಮಾಜಿ ಸಂಸದ ಡಾ.ವಿ ಮೈತ್ರೇಯನ್ ಅವರು ಶುಕ್ರವಾರ (ಜೂನ್ 9) ಮಾತೃ ಪಕ್ಷಕ್ಕೆ ಬಿಜೆಪಿ ಸೇರ್ಪಡೆಗೊಂಡರು.
ಪಕ್ಷದ ದೆಹಲಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಾಯಕ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಅವರ ಆರಂಭಿಕ ದಿನಗಳಿಂದಲೂ, ಮೈತ್ರೇಯನ್ ಅವರು RSS ಸದಸ್ಯರಾಗಿದ್ದರು. 1991 ರಲ್ಲಿಬಿಜೆಪಿ ತಮಿಳುನಾಡು ಘಟಕದ ಕಾರ್ಯಕಾರಿ ಸದಸ್ಯರಾದರು. 1995 ರಿಂದ 1997 ರವರೆಗೆ ಬಿಜೆಪಿಯ ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, 1997 ರಿಂದ 1999 ರವರೆಗೆ ಉಪಾಧ್ಯಕ್ಷರಾಗಿ ಮತ್ತು 1999 ರಿಂದ 2000 ರವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2000 ರಲ್ಲಿ ಅವರು ಬಿಜೆಪಿಗೆ ರಾಜೀನಾಮೆ ನೀಡಿ AIADMK ಗೆ ಸೇರಿದ್ದರು. 2022 ರಲ್ಲಿ ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿತರಾಗಿದ್ದರು.
2024 ಮತ್ತು 2026ರಲ್ಲಿ ತಮಿಳುನಾಡಿನಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್