
ಮುಂಬೈನಲ್ಲಿ 120 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ; ಮಾಜಿ ಪೈಲಟ್ ಸೇರಿ ಇಬ್ಬರ ಬಂಧನ
ಕೆಲವು ವರ್ಷಗಳ ಹಿಂದೆ ಆರೋಗ್ಯದ ಕಾರಣ ನೀಡಿ ಸೋಹೈಲ್ ಗಫಾರ್ ಕೆಲಸಕ್ಕೆ ರಾಜೀನಾಮೆ
Team Udayavani, Oct 7, 2022, 12:55 PM IST

ಮುಂಬೈ: ಮುಂಬೈನ ಗೋದಾಮಿನಲ್ಲಿ ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಡ್ರಗ್ಸ್ ಅನ್ನು ಮಾದಕ ವಸ್ತು ನಿಯಂತ್ರಣ ಘಟಕ ಪತ್ತೆ ಹಚ್ಚಿದ್ದು, ಅಂದಾಜು 120 ಕೋಟಿ ಮೌಲ್ಯದ 60 ಕೆಜಿ ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋಟಿತೀರ್ಥ ಪುಷ್ಕರಿಣಿಯ ಮೀನುಗಳ ಸಾವು, ಗ್ರಾಮಸ್ಥರ ಆಕ್ರೋಶ
ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾದ ಮಾಜಿ ಪೈಲಟ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಹೇಳಿದೆ. ಈ ಮೊದಲು ಗುಜರಾತ್ ನ ಜಾಮ್ ನಗರದಲ್ಲಿಯೂ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿದ್ದ ಮಾದಕ ವಸ್ತು ನಿಯಂತ್ರಣ ಘಟಕ ದೊಡ್ಡ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಮುಂಬೈನಲ್ಲಿ ವಶಪಡಿಸಿಕೊಂಡ ಮೆಫೆಡ್ರೋನ್ ಡ್ರಗ್ಸ್ ಪ್ರಕರಣದಲ್ಲಿ ಏರ್ ಇಂಡಿಯಾದ ಮಾಜಿ ಪೈಲಟ್ ಸೋಹೈಲ್ ಗಫಾರ್ ನನ್ನು ಬಂಧಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಆರೋಗ್ಯದ ಕಾರಣ ನೀಡಿ ಸೋಹೈಲ್ ಗಫಾರ್ ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ತಿಳಿಸಿದೆ.
ಈ ಡ್ರಗ್ಸ್ ಜಾಲ ಈಗಾಗಲೇ ಸುಮಾರು 225 ಕೆಜಿ ಡ್ರಗ್ಸ್ ಅನ್ನು ಮಾರಾಟ ಮಾಡಿದ್ದು, ಇದರಲ್ಲಿ 60 ಕೆಜಿ ಮೆಫೆಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾದಕ ವಸ್ತು ನಿಯಂತ್ರಣ ಏಜೆನ್ಸಿ ಪ್ರಕಟಣೆಯಲ್ಲಿ ಹೇಳಿದೆ.
ಗುಜರಾತ್ ನ ಜಾಮ್ ನಗರದ ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಮೇರೆಗೆ ಮುಂಬೈನಲ್ಲಿ ಡ್ರಗ್ಸ್ ಜಾಲ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ ನಲ್ಲಿ ಗುಜರಾತ್ ನ ವಡೋದರಾದಲ್ಲಿ ಸುಮಾರು 200ಕೆಜಿ ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಎರಡು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್

‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಡಿವೋರ್ಸ್ ಪಡೆಯಲು ಕೋರ್ಟ್ ಗೆ ಹೋಗಿ, ಶರಿಯಾ ಕೌನ್ಸಿಲ್ ಗಲ್ಲ..: ಮದ್ರಾಸ್ ಹೈಕೋರ್ಟ್

ಅಮೃತ ಪೀಳಿಗೆಗೆ ಬಣ್ಣದ ಕನಸು: ಕೌಶಲಾಭಿವೃದ್ಧಿಗೆ ಮತ್ತಷ್ಟೂ ಉತ್ತೇಜನ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ