ಇಂದು ಸಂಜೆ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವೀಕ್ಷಣೆಗೆ 9 ಕೇಂದ್ರ: ಬಿಗಿ ಪೊಲೀಸ್ ಭದ್ರತೆ


Team Udayavani, Jan 15, 2020, 8:40 AM IST

SHABARIMALE-1

ಶಬರಿಮಲೆ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಕ್ತರ ಗಡಣವೇ ಎದ್ದು ಕಾಣುತ್ತಿದೆ. ಸನ್ನಿಧಾನ ಸುತ್ತ ಪೊಲೀಸ್ ಪಹರೆ ಬಿಗುಗೊಳಿಸಲಾಗಿದೆ. ಬುಧವಾರ ಸಂಜೆ ಜ್ಯೋತಿ ದರ್ಶನವಾಗುವುದಾದರೂ ಮುಂಜಾನೆಯೇ ಸನ್ನಿಧಾನದ ಆಸುಪಾಸಿನ 9 ಕೇಂದ್ರಗಳಲ್ಲಿ ಭಕ್ತರು  ತುಂಬಿಕೊಂಡಿದ್ದಾರೆ.

ಸನ್ನಿಧಾನದಲ್ಲಿರುವ ವಾವರ ಸ್ವಾಮಿಯ ನಡೆಯಲ್ಲಿ, ಅಗ್ನಿಕುಂಡದ ಸಮೀಪ, ಅಪ್ಪ-ಅರವಣ ವಿತರಣಾ ಕೌಂಟರ್ ಸಮೀಪ, ಅನ್ನದಾನ ಮಂಟಪದ ಬಳಿ, ಮರಕ್ಕೂಟಂನಲ್ಲಿ, ಮಾಳಿಗಪುರತ್ತಮ್ಮ ದೇವಸ್ಥಾನದಲ್ಲಿ, ಇನ್ಸಿನೇಟರ್ ಕೇಂದ್ರ, ಶರಮ್ ಗುತ್ತಿ, ಪಾಂಡಿತ್ತಾವಳದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಕರಜ್ಯೋತಿ ವೀಕ್ಷಿಸಲಿದ್ದಾರೆ. ಪಿಳ್ಳಂಪಲ್ಲಿ, ನೀಲಕ್ಕಲ್, ಗಣೇಶ ಬೆಟ್ಟ ಪ್ರದೇಶದಲ್ಲೂ ಭಕ್ತರು ಸೇರಿಕೊಂಡಿದ್ದಾರೆ.

ಅಪಾಯ ಎದುರಾಗುವ ಹಿನ್ನೆಲೆಯಲ್ಲಿ  ಬಹು ಮಹಡಿ ಕಟ್ಟಡಗಳ ಮೇಲೆ ಹಾಗೂ ಪಂಪಾ ನದಿಯ ಸನಿಹವಿರುವ ಹಿಲ್​ಟಾಪ್​ನಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಇಲ್ಲಿನ ಪೊಲೀಸರು ನಿರ್ಬಂಧ ಹೇರಿದ್ದಾರೆ. ಶಬರಿಮಲೆ ಶ್ರೀಅಯ್ಯಪ್ಪ ಸನ್ನಿಧಾನದಲ್ಲಿ ಮಕರಜ್ಯೋತಿ ವೀಕ್ಷಣೆಗೆ ತಯಾರಿ ಪೂರ್ತಿಗೊಂಡಿದ್ದು, ಭಕ್ತರು ಭಾರಿ ಪ್ರಮಾಣದಲ್ಲಿ ಕ್ಷೇತ್ರಕ್ಕೆ ಬಂದು ಸೇರುತ್ತಿದ್ದಾರೆ.

ಜ.15ರಂದು ಪ್ರಾತಃ 2.09ಕ್ಕೆ ಮಕರ ಸಂಕ್ರಮಣ ಪೂಜೆ ನಡೆಸಲಾಯಿತು.ಈ ಹಿನ್ನೆಲೆಯಲ್ಲಿ ಜ.14ರ ತಡರಾತ್ರಿವರೆಗೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.  ಜ.15 ರ ಬುಧವಾರ ಪ್ರಾತಃಕಾಲ 2.09ಕ್ಕೆ ಸೂರ್ಯನು ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಮಣ ಪೂಜೆ ಮತ್ತು ಸಂಕ್ರಮಣಾಭಿಷೇಕ ನಡೆಸಲಾಯಿತು.  ತಿರುವನಂತಪುರಂನ ಕಾವಾಡಿಯಾರ್ ಅರಮನೆಯ ವಿಶೇಷ ತುಪ್ಪವನ್ನು ಸನ್ನಿಧಾನಕ್ಕೆ ತರಲಾಗಿದೆ.

ಸಂಕ್ರಮಣ ಪೂಜೆ ಹಾಗೂ ಸಂಕ್ರಮಣ ಅಭಿಷೇಕ ನಡೆದ ಬಳಿಕ ಹರಿವರಾಸನಂ ಹಾಡಿನೊಂದಿಗೆ ಗರ್ಭಗುಡಿ ಬಾಗಿಲು ಮುಚ್ಚಲಾಯಿತು.

ಪಂದಳ ಅರಮನೆಯಿಂದ ಜ.13ರ ಸೋಮವಾರ ಹೊರಟ ಪವಿತ್ರ ತಿರುವಾಭರಣಂಗಳನ್ನು ಹೊತ್ತುಕೊಂಡ ಮೆರವಣಿಗೆ ಜ.15ರ ಬುಧವಾರ ಮಧ್ಯಾಹ್ನ ಪಂಪಾಗೆ  ತಲುಪಲಿದ್ದು, ಅಲ್ಲಿಂದ ಪಂದಳ ಅರಮನೆಯ ರಾಜಪ್ರತಿನಿಧಿಗಳ ಅನುಮತಿಯೊಂದಿಗೆ ಪಂಪಾ ಗಣಪತಿ ಸನ್ನಿಧಾನದ ಸಮೀಪ ದಾಟಿ ನೀಲಿಮಲೆ ಬೆಟ್ಟವನ್ನು ಏರಲಿದೆ. ಕನ್ನಿ ಸ್ವಾಮಿಗಳು ತರುವ ಶರಗಳನ್ನು ಇಡುವ ಸ್ಥಳವಾದ ಶರಮ್‌ ಗುತ್ತಿಯಲ್ಲಿ ಕೇರಳ ಸರಕಾರದ ಅಧೀನದ ತಿರುವಾಂಕೂರ್ ದೇವಸ್ವಂ ಬೋರ್ಡ್‌ನ ಅಧಿಕಾರಿಗಳು ತಿರುವಾಭರಣಂ ಮೆರವಣಿಗೆಯನ್ನು  ಎದುರುಗೊಂಡು ಸ್ವಾಗತಿಸಿ, ಶಬರಿಮಲೆಯ ಅಯ್ಯಪ್ಪನ  ಸನ್ನಿಧಾನಕ್ಕೆ ಒಯ್ಯುತ್ತಾರೆ.

ಸಂಜೆ 5.30ಕ್ಕೆ ಅಯ್ಯಪ್ಪ ಸ್ವಾಮಿಯ ಯೋಗಮುದ್ರಾ ವಿಗ್ರಹಕ್ಕೆ ತಿರುವಾಭರಣಂಗಳನ್ನು ತೊಡಿಸಿ,ವಿಶೇಷ ಅಲಂಕಾರಗಳನ್ನು ಮಾಡಿ ಸಂಜೆ 6.30ರಿಂದ ದೀಪಾರಾಧನೆ ಹಾಗೂ ವಿವಿಧ ವೈಧಿಕ ಕಾರ್ಯಗಳು ನಡೆಯಲಿದೆ. ಸಂಜೆ 6.45ರ ನಂತರ ಪೊನ್ನಂಬಲ ಬೆಟ್ಟದಲ್ಲಿ ಮಕರಜ್ಯೋತಿ ಕಾಣಿಸಿಕೊಳ್ಳಲಿದೆ.

ಶಬರಿಮಲೆ ಸನ್ನಿಧಾನದ ವಿರುದ್ಧ ದಿಕ್ಕಿನಲ್ಲಿರುವ ಪೊನ್ನಂಬಲಮೇಡು ಗಿರಿಯಲ್ಲಿ  ಮಕರಜ್ಯೋತಿಯು ಮೂರು ಬಾರಿ ದೀಪ್ಯಮಾನವಾಗಿ ಮಿಣುಗಿ ಅದೃಶ್ಯವಾಗುತ್ತದೆ.

ಬಿಗಿಬಂದೋ‌ಬಸ್ತ್:
ಕಳೆದ ವರ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶಬರಿಮಲೆಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಕೇರಳ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಬಂದೋಬಸ್ತ್ ಮಾಡಿದೆ. ಕೇರಳ‌ ಪೊಲೀಸ್ ಇಲಾಖೆಯ ಸಿಬಂದಿಗಳ ಜತೆ ರಾಪಿಡ್ ಆಕ್ಷನ್ ಫೋರ್ಸ್, ಎನ್.ಡಿ.ಆರ್.ಎಫ್ ಪಡೆಗಳ ಸಿಬಂದಿಗಳು ಭದ್ರತೆ ಹಾಗೂ ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಸಿಬಂದಿಗಳಿಗೆ ಕರ್ತವ್ಯ ಹಂಚಿಕೆ ಮಾಡಿದ್ದು,ಸೂಕ್ತ ಮಾರ್ಗದರ್ಶನ ನೀಡಿದ್ದು ಯಾವುದೇ ಅಹಿತರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದೆ.

-ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.