RSS; ಜಾತಿ ಮತ್ತು ಲಿಂಗ ತಾರತಮ್ಯ ಹೋಗಲಾಡಿಸಲೇಬೇಕು: ಮೋಹನ್ ಭಾಗವತ್
Team Udayavani, Apr 7, 2024, 10:33 PM IST
ವಡೋದರಾ: ಸಮಾಜದಲ್ಲಿ ಜಾತಿ ಮತ್ತು ಲಿಂಗದ ಮೇಲಿನ ತಾರತಮ್ಯವನ್ನು ಹೋಗಲಾಡಿಸಲು ವಿಶೇಷ ಪ್ರಯತ್ನಗಳನ್ನು ಮಾಡುವ ಅಗತ್ಯವಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕರೆ ನೀಡಿದ್ದಾರೆ.
ಎರಡು ದಿನಗಳ ಗುಜರಾತ್ ಭೇಟಿಯ ಎರಡನೇ ದಿನದಂದು ವಡೋದರಾದಲ್ಲಿ ನಡೆದ ಬುದ್ಧಿಜೀವಿಗಳ ಸಭೆಯಲ್ಲಿ ಮಾತನಾಡಿ ಈ ಕರೆ ನೀಡಿದ್ದಾರೆ. ಶನಿವಾರ ಭಾಗವತ್ ದಕ್ಷಿಣ ಗುಜರಾತ್ನ ಭರೂಚ್ನಲ್ಲಿ ಇದೇ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಆರ್ಎಸ್ಎಸ್ ಹೇಳಿದೆ.
‘ಸೌಹಾರ್ದತೆ, ಕೌಟುಂಬಿಕ ಶಿಕ್ಷಣ, ಆಚರಣೆಗಳ ಅನುಸರಣೆ, ಪರಿಸರ ಸಂರಕ್ಷಣೆ, ಸ್ಥಳೀಯ ಮೌಲ್ಯಗಳ ಜಾಗೃತಿ ಮತ್ತು ನಾಗರಿಕ ಕರ್ತವ್ಯದ ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಗಳಿಗೆ ‘ಸಜ್ಜನ ಶಕ್ತಿ’ (ಉದಾತ್ತ ಶಕ್ತಿ) ಸಂಘಟಿತವಾಗಬೇಕು ಮತ್ತು ಸಕ್ರಿಯವಾಗಬೇಕು’ ಎಂದು ಕರೆ ನೀಡಿದ್ದಾರೆ.
“ಸಮಾಜದಲ್ಲಿ ಜಾತಿ ಮತ್ತು ಲಿಂಗ ವ್ಯತ್ಯಾಸಗಳನ್ನು ತೊಡೆದುಹಾಕಲು ವಿಶೇಷ ಪ್ರಯತ್ನಗಳನ್ನು ಮಾಡಬೇಕು ಮತ್ತು ಸಜ್ಜನ ಶಕ್ತಿಯ ಜಾಲವನ್ನು ರಚಿಸಲು ವಿಶೇಷ ಪ್ರಯೋಗಗಳನ್ನು ಮಾಡಬೇಕು” ಎಂದು ಹೇಳಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು