ಪ್ರಸಾದ್‌, ಸಾಧ್ವಿ ವಿರುದ್ಧ ದೋಷ ನಿಗದಿ


Team Udayavani, Oct 31, 2018, 8:55 AM IST

nia-30-10.jpg

ಮುಂಬೈ: ಮಹಾರಾಷ್ಟ್ರದ ಮಾಲೇಗಾಂವ್‌ನಲ್ಲಿ 2008ರಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಾದ್‌ ಪುರೋಹಿತ್‌, ಸಾಧ್ವಿ ಪ್ರಜ್ಞಾ ಸಿಂಗ್‌ ಮತ್ತು ಇತರ ಐವರ ವಿರುದ್ಧ ಎನ್‌ಐಎ ವಿಶೇಷ ಕೋರ್ಟ್‌ ಮಂಗಳವಾರ ದೋಷಾರೋಪ ನಿಗದಿ ಮಾಡಿದೆ. ಕ್ರಿಮಿನಲ್‌ ಸಂಚು, ಕೊಲೆ, ಭಯೋತ್ಪಾದಕ ಚಟುವಟಿಕೆ ನಡೆಸಿದ ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿದೆ. ನಿಷೇಧಿತ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯನ್ವಯ ಆರೋಪ ಹೊರಿಸಲಾಗಿದೆ. ನಿವೃತ್ತ ಮೇಜರ್‌ ರಮೇಶ್‌ ಉಪಾಧ್ಯಾಯ, ಅಜಯ ರಾಹಿರ್ಕರ್‌, ಸುಧಾಕರ್‌ ದ್ವಿವೇದಿ, ಸುಧಾಕರ ಚತುರ್ವೇದಿ, ಸಮೀರ್‌ ಕುಲಕರ್ಣಿ ವಿರುದ್ಧ ಆರೋಪ ಹೊರಿಸಲಾಗಿದೆ. ಅವರ ವಿರುದ್ಧದ ಆರೋಪ ಸಾಬೀತಾದರೆ ಜೀವಾವಧಿ ಶಿಕ್ಷೆ ಅಥವಾ ಗಲ್ಲು ಶಿಕ್ಷೆಯಾಗಲಿದೆ.

ಈ ಸಂದರ್ಭದಲ್ಲಿ ಆರೋಪಕ್ಕೆ ಗುರಿಯಾದ ಎಲ್ಲರೂ ಕೋರ್ಟ್‌ನಲ್ಲಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಸಾದ್‌ ಪುರೋಹಿತ್‌, ಯಾರೂ ನನ್ನ ಪ್ರಾಮಾಣಿಕತೆಯನ್ನು ಸಂಶಯಿಸುವಂತಿಲ್ಲ ಎಂದು ಹೇಳಿದ್ದಾರೆ. ಸಾಧ್ವಿ ಪ್ರಜ್ಞಾ ಸಿಂಗ್‌ ಪ್ರತಿಕ್ರಿಯೆ ನೀಡಿ, ಎನ್‌ಐಎ ಕ್ಲೀನ್‌ಚಿಟ್‌ ನೀಡಿದ್ದ ಹೊರತಾಗಿಯೂ ನನ್ನ ಮೇಲೆ ಆರೋಪ ಹೊರಿಸಲಾಗಿದೆ. ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.


ಈ ಹಿಂದೆ ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಮಕೋಕಾ) ಅನ್ವಯ ಗಂಭೀರ ಆರೋಪಗಳನ್ನು ಹೊರಿಸಲಾಗಿತ್ತು. ಇತ್ತೀಚೆಗಷ್ಟೇ ಈ ಕುರಿತು ಆದೇಶ ಹೊರಡಿಸಿದ್ದ ಎನ್‌ಐಎ ಕೋರ್ಟ್‌, ಮಕೋಕಾ ಕಾಯ್ದೆಯನ್ವಯ ಇರುವಂಥ ಆರೋಪಗಳನ್ನು ಕೈಬಿಟ್ಟು, ಯುಎಪಿಎ ಮತ್ತು ಐಪಿಸಿ ಕಾಯ್ದೆಯಡಿ ಮಾತ್ರವೇ ಆರೋಪ ಹೊರಿಸುವಂತೆ ಸೂಚಿಸಿತ್ತು. 2008ರ ಸೆ.29ರಂದು ಮಾಲೇಗಾಂವ್‌ನಲ್ಲಿ ಸ್ಫೋಟ ಸಂಭವಿಸಿ 6 ಮಂದಿ ಅಸುನೀಗಿ, 100 ಮಂದಿ ಗಾಯಗೊಂಡಿದ್ದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.