ಮಾಲೇಗಾಂವ್: ಕ. ಪುರೋಹಿತ್ ಅರ್ಜಿ ವಜಾ
Team Udayavani, Sep 5, 2018, 6:20 AM IST
ಹೊಸದಿಲ್ಲಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನನ್ನನ್ನು ಅಪಹರಿಸಿ, ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಚಿತ್ರಹಿಂಸೆ ನೀಡಲಾಗಿದ್ದು, ಆ ಬಗ್ಗೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆಯಾಗಬೇಕು ಎಂದು ಕೋರಿ ಕರ್ನಲ್ ಪುರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. ಈ ಹಂತದಲ್ಲಿ ಮಧ್ಯಪ್ರವೇಶಿಸಿದರೆ ವಿಚಾರಣೆಗೆ ತೊಡಕು ಉಂಟಾಗುತ್ತದೆ ಎಂದು ಕೋರ್ಟ್ ಹೇಳಿದೆ.