56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆ


Team Udayavani, Feb 9, 2023, 9:33 AM IST

Mallikarjun Kharge wears Louis Vuitton Scarf Worth Rs 56,332

ಹೊಸದಿಲ್ಲಿ: ಬುಧವಾರದ ರಾಜ್ಯಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರ ಉಡುಗೆಯ ಬಗ್ಗೆ ವಿಶೇಷ ಚರ್ಚೆ ನಡೆದಿದೆ. ಅದಕ್ಕೆ ಕಾರಣ ಪ್ರಧಾನಿ ಮೋದಿ ಧರಿಸಿದ್ದ ಮರುಬಳಕೆಯ ಪ್ಲಾಸ್ಟಿಕ್ ನಿಂದ ಮಾಡಲಾದ ಜಾಕೆಟ್ ಮತ್ತು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಧರಿಸಿದ್ದ 56,332 ರೂ ಮೌಲ್ಯದ ಶಾಲು.

ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ 56,332 ರೂ.ಗಳ ಮೌಲ್ಯದ ಲೂಯಿಸ್‌ ವಿಟಾನ್‌ ಬ್ರ್ಯಾಂಡ್‌ ನ‌ ಶಾಲು ಧರಿಸಿದ್ದರು. ಈ ವಿಚಾರ ಬಿಜೆಪಿಗರಿಂದ ಟೀಕೆಗೆ ಗುರಿಯಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಶೆಹಜಾದ್‌ ಪೂನಾವಾಲಾ ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಅನುಸರಿಸುವ ಆಯ್ಕೆಯೊಂದು, ಬೋಧನೆಯೊಂದು ಎಂದು ಶೀರ್ಷಿಕೆ ನೀಡಿದ್ದಾರೆ.

ಇದನ್ನೂ ಓದಿ:ಬಾರ್ಡರ್- ಗಾವಸ್ಕರ್ ಟ್ರೋಫಿ ಆರಂಭ: ಟೀಂ ಇಂಡಿಯಾಗೆ ಇಬ್ಬರು ಪದಾರ್ಪಣೆ

ಅಲ್ಲದೆ, ಖರ್ಗೆ ಅವರ ಫೋಟೋ ಹಾಗೂ ಮೋದಿ ಅವರ ಫೋಟೋಗಳನ್ನು ಹೋಲಿಕೆ ಮಾಡಿದ್ದಾರೆ. ಮೋದಿ ಅವರು ಧರಿಸಿದ್ದ ವೇಸ್‌ಕೋಟ್‌ ಮರುಬಳಕೆ ಪ್ಲಾಸಿಕ್‌ನಿಂದ ತಯಾರಿಸಲಾಗಿದೆ ಇದು ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿಯ ಸೂಚಕದ ಫ್ಯಾಶನ್‌. ಅದೇ ಖರ್ಗೆ ಅವರ ಶಾಲು? ಈ ಬಗ್ಗೆ ಏನು ಹೇಳಲಾಗುವುದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.

ಪ್ಲಾಸ್ಟಿಕ್‌ನಿಂದ ಸಿದ್ಧಪಡಿಸಿದ ಜ್ಯಾಕೆಟ್‌ ಧರಿಸಿದ್ದ ಮೋದಿ: ಬುಧವಾರ ರಾಜ್ಯಸಭಾ ಕಲಾಪದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮರುಬಳಕೆ ಮಾಡಲ್ಪಟ್ಟ ಪ್ಲಾಸ್ಟಿಕ್‌ನಿಂದ ತಯಾರಿಸಿದ ಜಾಕೆಟ್‌ ಧರಿಸಿದ್ದರು! ಬೆಂಗಳೂರಿನಲ್ಲಿ ಸೋಮವಾರ ಭಾರತ ಇಂಧನ ಸಪ್ತಾಹವನ್ನು ಮೋದಿ ಉದ್ಘಾಟಿಸಿದ್ದರು. ಆಗ ಅವರು, ಐಒಸಿ ತನ್ನ “ಅನ್‌ ಬಾಟಲ್ಡ್‌’ ಎಂಬ ಯೋಜನೆಯಡಿ ಸಿದ್ಧಪಡಿಸಿದ್ಧ ಸಮವಸ್ತ್ರಗಳನ್ನೂ ಬಿಡುಗಡೆ ಮಾಡಿದ್ದರು. ಏಕಬಳಕೆಯ ಪ್ಲಾಸ್ಟಿಕ್ಕನ್ನು ಇಲ್ಲ ಮಾಡಬೇಕೆಂದು ಪ್ರಧಾನಿ ಕರೆ ನೀಡಿದ್ದರಿಂದಲೇ ಇವನ್ನು ಸಿದ್ಧಪಡಿಸಲಾಗಿದೆ. ಐಒಸಿ ತನ್ನ ಕೇಂದ್ರಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು, ಎಲ್‌ಪಿಜಿ ಸಿಲಿಂಡರ್‌ ಗಳನ್ನು ಮನೆಗಳಿಗೆ ತಲುಪಿಸುವ ಸಿಬ್ಬಂದಿಗೆ ಇದೇ ಸಮವಸ್ತ್ರಗಳನ್ನು ನೀಡುತ್ತಿದೆ. ಈ ಸಮವಸ್ತ್ರಗಳನ್ನು ನವೀಕರಿಸಬಹು ದಾದ ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಹತ್ತಿಯಿಂದ ತಯಾರಿಸಲಾಗಿದೆ.

ಟಾಪ್ ನ್ಯೂಸ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

indi-1

ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.