ಮಲ್ಯ ಹಸ್ತಾಂತರ ನಿಧಾನ: ಸುಪ್ರೀಂ ಕೋರ್ಟ್ ಗರಂ
Team Udayavani, Dec 13, 2017, 6:45 AM IST
ನವದೆಹಲಿ: ಭಾರತೀಯ ಬ್ಯಾಂಕುಗಳಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಬೇಕಾಗಿರುವ ವಿಜಯ್ ಮಲ್ಯ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಗೊಳಿಸುವ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ.
ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾ. ಅರುಣ್ ಮಿಶ್ರಾ ಅವರುಳ್ಳ ನ್ಯಾಯಪೀಠ, “”ಮಲ್ಯ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಸ್ತಾಂತರ ತಡ ಆಗುತ್ತಿರುವುದೇಕೆ? ಕಳೆದೆಂಟು ತಿಂಗಳಿಂದ ಸುಪ್ರೀಂ ಕೋರ್ಟ್, ಆದೇಶಗಳನ್ನೂ ನೀಡುತ್ತಿದೆ. ವಿದೇಶಾಂಗ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನೂ ನೀಡುತ್ತಿದೆ. ಆದರೂ, ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ನಿಮ್ಮ (ಸರ್ಕಾರ) ಉದ್ದೇಶವಾದರೂ ಏನು?” ಎಂದು ಆಕ್ಷೇಪಿಸಿತು.
ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಣಿಂದರ್ ಸಿಂಗ್ ಹಾಗೂ ಹಿರಿಯ ವಕೀಲ ವಿ. ಮೋಹನಾ ಅವರ ಉಪಸ್ಥಿತಿ ಬಗ್ಗೆಯೂ ಮಾತನಾಡಿದ ನ್ಯಾಯಪೀಠ, ಪ್ರತಿ ಕಲಾಪಕ್ಕೂ ಸರ್ಕಾರದ ಪರ ಬೇರೆ ಬೇರೆ ವಕೀಲರು ಬರುತ್ತಿದ್ದಾರೆ. ಆದರೆ, ಇವರ್ಯಾರೂ ಗಡಿಪಾರು ಕುರಿತಂತೆ ಆದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುತ್ತಿಲ್ಲ” ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ