ದೇಶದ ಅತ್ಯಂತ ದೊಡ್ಡ ದಂಗೆಕೋರ ಮೋದಿ : ಮಮತಾ ಬ್ಯಾನರ್ಜಿ
ದೇಶದಲ್ಲಿ ದೆವ್ವಗಳು ಆಡಳಿತ ನಡೆಸುತ್ತಿವೆ : ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಗುಡುಗು
Team Udayavani, Feb 24, 2021, 3:49 PM IST
ಪಶ್ಚಿಮ ಬಂಗಾಳ : ತಮ್ಮ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಹೆಂಡತಿಯನ್ನು ಕೇಂದ್ರೀಕರಿಸಿ ಮಾಡಿದ ಸಿಬಿಐ ದಾಳಿಗೆ ಸಂಬಂಧಿಸಿದ ವಿಚಾರಕ್ಕೆ ಪ್ರಧಾನಿ ಮೋದಿಯವರನ್ನು ದಂಗೆಕೋರ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಮೋದಿ ದೇಶದ ಅತ್ಯಂತ ದೊಡ್ಡ ದಂಗೆಕೋರ ಎಂದು ಕೋಲ್ಕತ್ತಾ ಸಮೀಪದಲ್ಲಿ ನಡೆಯುತ್ತಿದ್ದ ಚುನಾವಣಾ ಪ್ರಚಾರವನ್ನುದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ.
ಓದಿ : ಕಳೆದುಹೋದ ಮರ್ಯಾದೆ ಮತ್ತೆ ಬರುವಂತೆ ದುರ್ಗಾ ದೇವಿಗೆ ಪತ್ರ ಬರೆದು ಬೇಡಿಕೊಂಡ ಭಕ್ತ!
ಕಳೆದ ನವೆಂಬರ್ ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಟ್ ಟ್ರಂಪ್ ಸೋತಾಗ ಅನುಭವಿಸಿದ ಹಿಂಸಾಚಾರಕ್ಕಿಂತಲೂ ಕೆಟ್ಟ ಪರಿಸ್ಥಿತಿ ಇಲ್ಲಿಯೂ ಕೂಡ ಸಂಭವಿಸಲಿದೆ ಎಂದು ಬ್ಯಾನರ್ಜಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ
ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ನಾನು ಗೋಲ್ ಕೀಪರ್ ನಂತೆ ಇರುತ್ತೇನೆ. ಬಿಜೆಪಿ ಒಂದಂಕಿಯನ್ನೂ ಪಡೆಯದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಮಮತಾ ಹೇಳಿದ್ದಾರೆ.
ಕಲ್ಲಿದ್ದಲು ಮಾಫಿಯಾದಲ್ಲಿ ತೊಡಗಿಕೊಂಡಿದ್ದರು ಎಂದು ಆರೋಪಿಸಿ ಸಿಬಿಐ ಅಭಿಷೇಕ್ ಬ್ಯಾನರ್ಜಿ ಅವರ ಹೆಂಡತಿ ರುಜಿರಾ ಅವರನ್ನು ತನಿಖೆಗೆ ಒಳಪಡಿಸಿದ ಹಿನ್ನಲೆಯಲ್ಲಿ ಬ್ಯಾನರ್ಜಿ, ಮೋದಿ ವಿರುದ್ಧ ಈ ರೀತಿಯಲ್ಲಿ ಕಟುವಾಗಿ ಕುಟುಕಿದ್ದಾರೆ.
ನೀವು ನನ್ನನ್ನು ಕೊಲ್ಲಬಹುದು, ಹೊಡೆಯಬಹುದು, ಆದರೇ, ಒಬ್ಬ ಮಹಿಳೆಗೆ ಗೌರವವನ್ನು ನೀಡದೆ ಇರುವುದಕ್ಕೆ ಸಾಧ್ಯವಿದೆಯೇ..? ನನ್ನ ಸೊಸೆಯನ್ನು ಕಲ್ಲಿದ್ದಲು ಮಾಫಿಯಾದಲ್ಲಿ ತೊಡಗಿದ್ದಾರೆ ಎಂದು ಹೇಳುತ್ತೀರಾ..? ಆಕೆಯನ್ನು ಕಲ್ಲಿದ್ದಲು ಕಳ್ಳಿ ಎಂದು ಕರೆಯುತ್ತೀರಾ..? ಎಂದು ಮಮತಾ ಪ್ರಶ್ನಿಸಿದ್ದಾರೆ.
ನೀವು ನಿಮ್ಮ ಮಗಳು ಅಥವಾ ಅಮ್ಮನನ್ನು ಹಾಗೆ ಜರೆಯುತ್ತೀರಾ..? ನಮಗೆ ಎಲ್ಲವೂ ತಿಳಿದಿದೆ. ಆದರೇ ನಾನೇನು ಹೇಳುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಸೆಲೆಬ್ರಿಟಿಗಳಾದ ಸಯೋನಿ ದತ್ತಾ ಮತ್ತು ಜೂನ್ ಮಾಲಿಯಾ ಮತ್ತು ಕ್ರಿಕೆಟಿಗ ಮನೋಜ್ ತಿವಾರಿ ಸೇರಿದಂತೆ ಹಲವರು ತೃಣಮೂಲ ಕಾಂಗ್ರೆಸ್ ಸೇರಿಕೊಂಡು, “ಖೇಲಾ ಹೋಬೆ (ಗೇಮ್ ಆನ್)” ಘೋಷಣೆಯನ್ನು ಕೂಗಿದರು.
ದೇಶದಲ್ಲಿ ದೆವ್ವಗಳು ಆಡಳಿತ ನಡೆಸುತ್ತಿವೆ. ಅವರು ನಮ್ಮ ಬೆನ್ನು ಮೂಳೆಯನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ಅವರು ಬಂಗಾಳಕ್ಕೆ ನುಸುಳುತ್ತಾರೆ. ಬಂಗಾಳವನ್ನು ಹಿಡಿಯುತ್ತಾರೆ. ನಿಮಗೆ ಏನು ಬೇಕಾಗಿದೆ..? ಬಂಗಾಳ ಬಂಗಾಳವಾಗಿಯೇ ಉಳಿಯಬೇಕಾ..? ಅಥವಾ ಬಿಜೆಪಿ ಏನು ಮಾಡಿದರೂ ಅದನ್ನೇ ಒಪ್ಪಿಕೊಳ್ಳುತ್ತೀರಾ..? ಎಂದು ಮಮತಾ, ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಓದಿ : ಅಧಿಕಾರ ಕಳೆದುಕೊಂಡ ಕಾಂಗ್ರೆಸ್; ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಅಂಕಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ