ಆ.9ರಿಂದ “ಬಿಜೆಪಿ ತೊಲಗಿಸಿ’ ಆಂದೋಲನ
Team Udayavani, Jul 22, 2017, 8:30 AM IST
ಕೋಲ್ಕತಾ: ಕೇಂದ್ರ ಸರಕಾರದ ವಿರುದ್ಧ ಹರಿಹಾಯುತ್ತಲೇ ಇರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ, “ಬಿಜೆಪಿ ತೊಲಗಿಸಿ’ ಆಂದೋಲನ ಆರಂಭಿಸಲು ಹೊರಟಿದ್ದಾರೆ.
ಆ.9ರಿಂದಲೇ ಇಂಥ ಆಂದೋಲನ ನಡೆಸುವುದಾಗಿ ಅವರು ಶುಕ್ರವಾರ ಘೋಷಿಸಿದ್ದಾರೆ. ಕೇಸರಿ ಪಕ್ಷವನ್ನು ವಿರೋಧಿಸುವ ಎಲ್ಲ ಪಕ್ಷಗಳ ಜೊತೆ ಬಂಗಾಳ ನಿಲ್ಲುತ್ತದೆ ಎಂದೂ ಅವರು ಹೇಳಿದ್ದಾರೆ. ವಿದೇಶಗಳ ಜೊತೆ ಉತ್ತಮ ಸಂಬಂಧ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಮಮತಾ, “ಬಂಗಾಳಕ್ಕೆ ಹೊಂದಿಕೊಂಡಿರುವ ನೇಪಾಲ, ಭೂತಾನ್, ಬಾಂಗ್ಲಾದೇಶಗಳ ಜೊತೆ ವಿದೇಶಾಂಗ ಸಂಬಂಧ ಸುಧಾರಿಸಲು ಏಕೆ ಕೇಂದ್ರ ಸರಕಾರ ಪ್ರಯತ್ನಿಸುತ್ತಿಲ್ಲ’ ಎಂದೂ ಪ್ರಶ್ನಿಸಿದ್ದಾರೆ.
ಸಿಎಂ ಮಮತಾ ಅವರ ಅಭಿಯಾನ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು, “ತೃಣಮೂಲ ಕಾಂಗ್ರೆಸ್ ಪಕ್ಷವು ತ್ರಿಪುರಾದಲ್ಲಿ ಕೇವಲ ನಾಮಫಲಕವಾಗಿ ಉಳಿದಿದೆ. ಇದು ಮಮತಾಗೆ ಗೊತ್ತಿರಲಿ. ಅವರ ಓಲೈಕೆ ಮತ್ತು ಕೋಮು ರಾಜಕಾರಣದ ವಿರುದ್ಧ ಹೋರಾಡಲು ಬಿಜೆಪಿ ಸಿದ್ಧವಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ