ಹಣೆಗೆ ಗಾಯವಾಗಿ ಚಿಕಿತ್ಸೆಗೊಳಗಾಗಿದ್ದ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Mar 15, 2024, 9:24 AM IST
ಕೋಲ್ಕತ್ತಾ: ಮನೆಯಲ್ಲೇ ಬಿದ್ದು ಹಣೆ ಹಾಗೂ ಮೂಗಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.
ಗುರುವಾರ ಕಾರ್ಯಕ್ರಮವೊಂದಕ್ಕೆ ತೆರಳಿ ಬಳಿಕ ಮನೆಗೆ ಬಂದ ವೇಳೆ ಅಚಾನಕ್ ಆಗಿ ಬಿದ್ದಿದ್ದರು ಈ ವೇಳೆ ಅವರ ಹಣೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿತ್ತು ಕೂಡಲೇ ಅವರನ್ನು ಸರಕಾರಿ ಸ್ವಾಮ್ಯದ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಲ್ಲಿ ಪರೀಕ್ಷೆ ನಡೆಸಿದ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಹಣೆಗೆ ಗಾಯವಾದ ನಿಟ್ಟಿನಲ್ಲಿ ಹೊಲಿಗೆ ಹಾಕಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ತಡರಾತ್ರಿ ಮನೆಗೆ ಕಳುಹಿಸಿಕೊಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಮಾಹಿತಿ ನೀಡಿದ್ದಾರೆ.
ಹಣೆಗೆ ಪೆಟ್ಟಾಗಿರುವ ಕಾರಣ ಅವರು ತೀವ್ರ ನಿಗಾದಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈ ವೇಳೆ ಅವರ ಜೊತೆಗೆ ಆಕೆಯ ಸೋದರಳಿಯ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.
ಶೀಘ್ರ ಗುಣಮುಖರಾಗಲೆಂದು ಹಾರೈಸಿದ ನಾಯಕರು
ಮಮತಾ ಬ್ಯಾನರ್ಜಿ ಅವರು ಬಿದ್ದು ಪೆಟ್ಟಾಗಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದಂತೆ ಕೆಲವು ರಾಜಕೀಯ ಮುಖಂಡರು ಮಮತಾ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ, ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದು, “ಮಮತಾ ಬ್ಯಾನರ್ಜಿ ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.”
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಟ್ವೀಟ್ ಮಾಡಿದ್ದೂ ಮಮತಾ ಬ್ಯಾನರ್ಜಿ ಅವರು ಗಾಯಗೊಂಡಿರುವ ಪೋಸ್ಟ್ ನೀಡಿ ಶಾಕ್” ಆಗಿರುವ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಮಮತಾ ಬ್ಯಾನರ್ಜಿಯವರಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ: Tragedy: ಕಂದಕಕ್ಕೆ ಬಿದ್ದ ಕಾರು… ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ, ಬದುಕುಳಿದ ಮಗು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ