ಟಿಎಂಸಿ ಕೋಮುವಾದಿ ಪಕ್ಷ, ಹಿಂದೂ, ಕ್ರಿಶ್ಚಿಯನ್ ಮತಗಳ ವಿಭಜನೆಗೆ ಸಂಚು: ಮಾಜಿ ಶಾಸಕ
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಟಿಎಂಸಿ ನಿರ್ಧರಿಸಿತ್ತು.
Team Udayavani, Dec 24, 2021, 2:55 PM IST
ಪಣಜಿ: ಮೂರು ತಿಂಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮ್ಲೇದಾರ್ ಶುಕ್ರವಾರ (ಡಿಸೆಂಬರ್ 24) ಮಮತಾ ಬ್ಯಾನರ್ಜಿಯ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದೊಂದು ಕೋಮುವಾದಿ ಪಕ್ಷವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ ಮತಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಟರ್ಬನೇಟರ್ ಹರ್ಭಜನ್ ಸಿಂಗ್
ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಲೋಂಡಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಾವೋ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ರಾಜ್ಯದಲ್ಲಿ ಟಿಎಂಸಿ ಸೇರಿದ್ದ ಹಲವು ಸ್ಥಳೀಯ ಮುಖಂಡರಲ್ಲಿ ಇವರು ಕೂಡಾ ಮೊದಲಿಗರಾಗಿದ್ದರು.
2022ರ ಫೆಬ್ರುವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಟಿಎಂಸಿ ನಿರ್ಧರಿಸಿತ್ತು.
ಸುದ್ದಿಗಾರರ ಜತೆ ಮಾತನಾಡಿದ ಮಾಮ್ಲೇದಾರ್, ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷದ ಸಾಧನೆಗೆ ಸಂಪೂರ್ಣವಾಗಿ ಪ್ರಭಾವಿತನಾಗಿ ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೆ. ಇದೊಂದು ಜಾತ್ಯತೀತ ಪಕ್ಷ ಎಂಬ ಬಗ್ಗೆ ಹೆಮ್ಮೆ ಇತ್ತು. ಆದರೆ ಕಳೆದ 15-20 ದಿನಗಳಲ್ಲಿ ನಾನು ಗಮನಿಸಿದಂತೆ ಇದೊಂದು ಬಿಜೆಪಿಗಿಂತ ಕೆಟ್ಟದಾದ ಪಕ್ಷವಾಗಿದೆ ಎಂದು ಆರೋಪಿಸಿದರು.
ಗೋವಾದಲ್ಲಿ ಟಿಎಂಸಿ ಹಿಂದೂ ಮತ್ತು ಕ್ರಿಶ್ಚಿಯನ್ ಮತಗಳನ್ನು ವಿಭಜಿಸಲು ಯತ್ನಿಸುತ್ತಿದೆ. ಚುನಾವಣಾ ಪೂರ್ವ ಮೈತ್ರಿಯಂತೆ, ಕ್ರಿಶ್ಚಿಯನ್ ಮತಗಳು ಟಿಎಂಸಿಗೆ ಹಾಗೂ ಹಿಂದೂಗಳ ಮತ ಎಂಜಿಪಿಗೆ ಎಂಬುದಾಗಿ ಲೆಕ್ಕಚಾರ ಹಾಕಿದೆ. ಇದೊಂದು ಕೋಮುವಾದಿ ಪಕ್ಷವಾಗಿದೆ ಎಂದು ಮಾಮ್ಲೇದಾರ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ