BJP ಹಣ ಕೊಟ್ರೆ ತೆಗೆದುಕೊಂಡು TMCಗೆ ಮತ ಹಾಕಿ : ದೀದಿ ಕಿಡಿ
ಬಿಜೆಪಿ ವಿರುದ್ಧ ದೀದಿ ಕಿಡಿ
Team Udayavani, Mar 7, 2021, 5:13 PM IST
ಕೊಲ್ಕತ್ತಾ : ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲಿಯೇ ಪ್ರತಿಭಟನೆ ಶುರು ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೈಲ ಬೆಲೆ ಮತ್ತು ಎಲ್ ಪಿ ಜಿ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಬಿಜೆಪಿ ಸರ್ಕಾರ ಹಾಗೂ ಮೋದಿ, ಅಮಿತ್ ಶಾ ಬಗ್ಗೆ ಕಿಡಿಕಾರಿರುವ ದೀದಿ, ಭಾರತಕ್ಕೆ ಗೊತ್ತಿದೆ ಯಾರು ಸಿಂಡಿಕೇಟ್ ಗಳು ಎಂದು, ಅವರು ಮೋದಿ ಮತ್ತು ಅಮಿತ್ ಶಾ ಎಂದಿದ್ದಾರೆ.
ನಾವು ಹೋರಾಟಕ್ಕೆ ಸಿದ್ದರಿದ್ದೇವೆ. ಅವರು (BJP)ವೋಟುಗಳಿಗಾಗಿ ಹಣ ನೀಡಿದರೆ ಅದನ್ನು ತೆಗೆದುಕೊಂಡು ಟಿಎಂಸಿಗೆ ಮತ ಹಾಕಿ ಎಂದಿದ್ದಾರೆ. ಇನ್ನು ಬದಲಾವಣೆ ಕೇವಲ ದೆಹಲಿಯಲ್ಲಿ ಮಾತ್ರ ಆಗುತ್ತಿದೆ. ಮಹಿಳೆಯರಿಗೆ ಬಂಗಾಳದಲ್ಲಿ ರಕ್ಷಣೆ ಇಲ್ಲ ಎಂದು ಹೇಳಿರುವ ಮೋದಿ ಮಾತನ್ನು ಉಲ್ಲೇಖಿಸಿದ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ, ಬಿಹಾರ ಮತ್ತು ಇತರೆ ರಾಜ್ಯಗಳನ್ನು ನೋಡಿ. ನಮ್ಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ದೀದಿ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ.
ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ಮಮತಾ ಬ್ಯಾನರ್ಜಿ ಸಿಲಿಗುರಿ ಪ್ರದೇಶದಲ್ಲಿ ಪಾದಯಾತ್ರ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಕೆಂಪು ಬಣ್ಣದ ಬಾವುಟವನ್ನು ಹಿಡಿದು ಮಮತಾ ಬ್ಯಾನರ್ಜಿಗೆ ಬೆಂಬಲ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ