ನಮಗೆ ಇವಿಎಂ ಬೇಡ; ನಾವು ಮತಪತ್ರಕ್ಕೆ ಮರಳಬೇಕು: ಮಮತಾ ಬ್ಯಾನರ್ಜಿ


Team Udayavani, Jun 4, 2019, 11:32 AM IST

Mamata-angry-730

ಕೋಲ್ಕತ : ಪಶ್ಚಿಮ ಬಂಗಾಲದ ಮತದಾರರಲ್ಲಿ ಭಾರತೀಯ ಜನತಾ ಪಕ್ಷದ ಒಲವು 2019ರ ಲೋಕಸಭಾ ಚುನಾವಣೆಯಲ್ಲಿ ಗಮನಾರ್ಹವಾಗಿ ಹೆಚ್ಚಿರುವುದನ್ನು ಸಹಿಸಲಾಗದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ರಾಜಕೀಯಕ್ಕೆ ಸಂಬಂಧಿಸಿದಂತೆ ತಮ್ಮ ಮುಂದಿನ ವ್ಯೂಹಗಾರಿಕೆಯನ್ನು ಬಹಿರಂಗಪಡಿಸಿದ್ದಾರೆ.

“ನಾವು ಪ್ರಜಾಸತ್ತೆಯ ಉಳಿವಿಗಾಗಿ ಮನೆಮನೆ ಭೇಟಿ ನೀಡುವ ಆಂದೋಲನವನ್ನು ಆರಂಭಿಸುತ್ತೇವೆ; ನಮಗೆ ಇವಿಎಂ ಗಳು ಬೇಕಾಗಿಲ್ಲ; ನಾವು ಮತ್ತೆ ಮತ ಪತ್ರ ಯುಗಕ್ಕೆ ಮರಳುವ ಅಗತ್ಯವಿದೆ; ಇವಿಎಂ ಸಾಚಾತನದ ಬಗ್ಗೆ ಸತ್ಯಶೋಧನ ಸಮಿತಿಯನ್ನು ರೂಪಿಸುವ ಅಗತ್ಯವಿದೆ’ ಎಂದು ಮಮತಾ ಗುಡುಗಿದ್ದಾರೆ.

ಪಶ್ಚಿಮ ಬಂಗಾಲದಲ್ಲಿ 2014ರಲ್ಲಿ ಕೇವಲ ಎರಡು ಸ್ಥಾನಗಳನ್ನು ಮಾತ್ರವೇ ಗೆದ್ದಿದ್ದ ಬಿಜೆಪಿ 2019ರ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ 18 ಸೀಟುಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನೇ ಬರೆದಿದೆ. ಇದು ಮಮತಾ ಬ್ಯಾನರ್ಜಿ ಅವರನ್ನು ಕಂಗಾಲುಗೊಳಿಸಿದೆ.

ಪಶ್ಚಿಮ ಬಂಗಾಲದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯ ಎಲ್ಲ ಹಂತಗಳಲ್ಲಿ ಹಿಂಸೆ, ದೊಂಬಿ ಸ್ಫೋಟಗೊಂಡಿದೆ. ಇವೆಲ್ಲಕ್ಕೂ ಬಿಜೆಪಿಯೇ ಕಾರಣ ಎಂದು ಮಮತಾ ದೂರಿದ್ದಾರೆ. ಮೇಲಾಗಿ ಚುನಾವಣಾ ಆಯೋಗ ಬಿಜೆಪಿಯ ನಿರ್ದೇಶನದ ಪ್ರಕಾರ ಕೆಲಸ ಮಾಡುತ್ತಿದೆ; ಚುನಾವಣಾ ಆಯೋಗದ ಅಧಿಕಾರಿಗಳೆಲ್ಲರೂ ಆರ್‌ಎಸ್‌ಎಸ್‌ ಸದಸ್ಯರಾಗಿದ್ದಾರೆ ಎಂದೆಲ್ಲ ಮಮತಾ ದೂರಿದ್ದರು.

ಆದರೆ ಪಶ್ಚಿಮ ಬಂಗಾಲದ ಮತದಾರರು ಮಮತಾ ಆಡಳಿತ ವೈಖರಿ, ಬಹುಕೋಟಿ ಶಾರದಾ ಚಿಟ್‌ ಫ‌ಂಡ್‌ ಹಗರಣ ಇತ್ಯಾದಿಗಳಿಂದ ಬೇಸತ್ತಿರುವುದನ್ನು ಚುನಾವಣೆಯಲ್ಲಿ ಬಹಿರಂಗಪಡಿಸಿದ್ದಾರೆ; ಮೇಲಾಗಿ ಚುನಾವಣೆ ಬಳಿಕ ಟಿಎಂಸಿಯ ಅನೇಕ ಶಾಸಕರು, ಕೌನ್ಸಿಲರ್‌ಗಳು ಬಿಜೆಪಿ ಸೇರಿರುವುದು ಮಮತಾ ಅವರ ನಿದ್ದೆಗೆಡಿಸಿದೆ ಎಂದು ವರದಿಗಳು ಹೇಳುತ್ತವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.