West Bengal ಪಂಚಾಯತ್ ಚುನಾವಣೆ ಹಿಂಸಾಚಾರ; ವಿಪಕ್ಷಗಳನ್ನು ದೂಷಿಸಿದ ಮಮತಾ
Team Udayavani, Jun 15, 2023, 7:20 PM IST
ಕೋಲ್ಕತಾ: ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ವಿರೋಧ ಪಕ್ಷಗಳು ಹಿಂಸಾಚಾರದ ಮೂಲಕ ರಾಜ್ಯವನ್ನು ಕೆಡಿಸಲು ಪ್ರಯತ್ನಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಆಕ್ರೋಶ ಹೊರ ಹಾಕಿದ್ದಾರೆ.
ಮಹೇಸ್ತಲದಲ್ಲಿರುವ ಪಕ್ಷದ ಕಚೇರಿಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ತೃಣಮೂಲ ಕಾಂಗ್ರೆಸ್ ನಾಯಕಿ ಬ್ಯಾನರ್ಜಿ,”ವಿರೋಧ ಪಕ್ಷಗಳು ನಾಮಪತ್ರ ಸಲ್ಲಿಕೆ ವೇಳೆ ಹಿಂಸಾಚಾರ ನಡೆಸುವ ಮೂಲಕ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ. ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಚೋಪ್ರಾ ಪ್ರದೇಶದಲ್ಲಿ (ಉತ್ತರ ದಿನಾಜ್ಪುರ ಜಿಲ್ಲೆಯ) ಇಂದಿನ ಹಿಂಸಾಚಾರದ ಹಿಂದೆ ಸಿಪಿಐ(ಎಂ) ಕೈವಾಡವಿದೆ ಮತ್ತು ಭಂಗೋರ್ನಲ್ಲಿ (ದಕ್ಷಿಣ 24 ಪರಗಣಗಳು) ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಐಎಸ್ಎಫ್ ದಾಳಿ ನಡೆಸುತ್ತಿದೆ, ”ಎಂದು ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಹಣವನ್ನು ನಿಲ್ಲಿಸಿದೆ ಮತ್ತು ಟಿಎಂಸಿಗೆ ಬೆದರಿಕೆ ಹಾಕಲು ಕೇಂದ್ರ ಏಜೆನ್ಸಿಗಳನ್ನು ಬಳಸುತ್ತಿದೆ ಎಂದು ಬ್ಯಾನರ್ಜಿ ಟೀಕಿಸಿದರು.
ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಕಳೆದ ವಾರದಿಂದ ಬಂಗಾಳದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ