ತೃತೀಯ ರಂಗಕ್ಕಾಗಿ ಮಮತಾ ಮಾತು
Team Udayavani, Mar 28, 2018, 6:00 AM IST
ಹೊಸದಿಲ್ಲಿ: NDAಯಿಂದ ಟಿಡಿಪಿ ಹೊರಬರುತ್ತಿದ್ದಂತೆಯೇ ತೃತೀಯ ರಂಗ ಸ್ಥಾಪನೆ ಪ್ರಕ್ರಿಯೆ ಮತ್ತೂಮ್ಮೆ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರೇ ತೃತೀಯ ರಂಗ ಕಟ್ಟುವ ಕೆಲಸಕ್ಕೆ ಕೈಹಾಕಿದ್ದು, ಮಂಗಳವಾರ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ರನ್ನು ಭೇಟಿ ಮಾಡಿದ್ದಾರೆ.
ಭೇಟಿ ಅನಂತರದಲ್ಲಿ ಮಾತನಾಡಿದ ಮಮತಾ, ಚುನಾವಣೆಗಳಲ್ಲಿ ಬಿಜೆಪಿ ವಿಜಯವನ್ನು ಹತ್ತಿಕ್ಕಲು ವಿಪಕ್ಷಗಳು ಒಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ. ಎಲ್ಲ ವಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿ ವಿರುದ್ಧ ಹೋರಾಡಲು ರಾಜ್ಯಗಳಲ್ಲಿ ಅತ್ಯಂತ ಬಲಿಷ್ಠ ವಿಪಕ್ಷವನ್ನು ನಾವು ಬೆಂಬಲಿಸಬೇಕು ಎಂದಿದ್ದಾರೆ.
ಬಿಜೆಪಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ದೇಶದೆಲ್ಲೆಡೆ ಬಿಜೆಪಿ ವಿರೋಧಿ ಅಲೆಯಿದೆ. ನಾನು ಎಲ್ಲ ರಾಜ್ಯಗಳಿಗೂ ಪ್ರವಾಸ ಮಾಡಿದ್ದೇನೆ. ಜನರ ಭಾವನೆ ನನಗೆ ತಿಳಿದಿದೆ. ನೋಟು ಅಪಮೌಲ್ಯ, ಜಿಎಸ್ಟಿ, ಬ್ಯಾಂಕ್ ಹಗರಣಗಳು ತಳಮಟ್ಟದ ಜನರನ್ನೂ ಬಾಧಿಸಿವೆ ಎಂದವರು ಹೇಳಿದ್ದಾರೆ. ಬಿಜೆಪಿಯ ಬಂಡಾಯ ಮುಖಂಡರಾದ ಶತ್ರುಘ್ನ ಸಿನ್ಹಾ, ಯಶವಂತ ಸಿನ್ಹಾ ಹಾಗೂ ಅರುಣ್ ಶೌರಿಯವರನ್ನೂ ಬುಧವಾರ ಭೇಟಿ ಮಾಡುವುದಾಗಿ ಮಮತಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ