ದೀದಿಗೆ ಸಾಮರ್ಥ್ಯವಿದೆ
Team Udayavani, Jan 22, 2019, 1:44 AM IST
ಕೋಲ್ಕತಾ: ತೃಣಮೂಲ ಕಾಂಗ್ರೆಸ್ನ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತಮ ಆಡಳಿತಗಾರ್ತಿಯಾಗಿದ್ದು, ದೇಶವನ್ನು ಮುನ್ನಡೆಸಲು ಬೇಕಾದ ಎಲ್ಲಾ ಚಾತುರ್ಯ ಹೊಂದಿದ್ದಾರೆಂದು ಸಿಎಂ ಕುಮಾರ ಸ್ವಾಮಿ ತಿಳಿಸಿದ್ದಾರೆ. ಕೋಲ್ಕತಾದಲ್ಲಿ ಶನಿವಾರ ನಡೆದ ಮಹಾ ಘಟಬಂಧನ ರ್ಯಾಲಿಯ ನಂತರ ಪಿಟಿಐಗೆ ನೀಡಲಾದ ಸಂದರ್ಶನದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ.
‘ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಸಮರ್ಥ ಆಡಳಿತ ನೀಡಿದ್ದಾರೆ. ಹಾಗಾಗಿ, ಅವರು ದೇಶವನ್ನೂ ಸಮರ್ಥವಾಗಿ ಮುನ್ನಡೆಸಬಲ್ಲರು ಎಂಬ ನಿಲುವು ನನ್ನದು’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು, ಪ್ರಧಾನಿ ಅಭ್ಯರ್ಥಿಯ ಬಗ್ಗೆ ಮಹಾ ಘಟಬಂಧನದಲ್ಲಿ ಒಮ್ಮತವಿಲ್ಲ ಎಂಬ ಟೀಕೆಗಳಿಗೆ ಉತ್ತರಿಸಿದ ಅವರು, ”ಮಹಾ ಘಟಬಂಧನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಬೇಕೆಂದರೆ ಈಗಲೇ ಒಗ್ಗಟ್ಟಿನಿಂದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನಿರ್ಧರಿಸಬೇಕು ಎಂದೇನಿಲ್ಲ. ದೇಶದ ಜನತೆ ಪ್ರಧಾನಿ ಮೋದಿಯವರ ಆಳ್ವಿಕೆಯಿಂದ ಬೇಸತ್ತಿದ್ದಾರೆ. ಅನೇಕ ರಾಜ್ಯಗಳು ತಮ್ಮದೇ ಆದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮೋದಿ ವಿರೋಧಿ ಅಲೆಯು ಮಹಾ ಘಟಬಂಧನಕ್ಕೆ ನೆರವಾಗಲಿದೆ. ಹಾಗಾಗಿ, ಈಗಲೇ ಪ್ರಧಾನಿ ಅಭ್ಯರ್ಥಿ ಘೋಷಣೆ ಅಗತ್ಯವಿಲ್ಲ” ಎಂದರಲ್ಲದೆ, ”ಸದ್ಯದ ಮಟ್ಟಿಗೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಮಹಾ ಘಟಬಂಧನವೇ ಪರ್ಯಾಯ” ಎಂದು ಅಭಿಪ್ರಾಯಪಟ್ಟರು.
ಭರ್ಜರಿ ರ್ಯಾಲಿ ಬಿಜೆಪಿ ಪ್ಲ್ರಾನ್: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ರ್ಯಾಲಿ ನಡೆಸಿದ ಬೆನ್ನಲ್ಲೇ ಬಿಜೆಪಿ ಹಲವು ರ್ಯಾಲಿಗಳನ್ನು ನಡೆಸಲು ನಿರ್ಧರಿಸಿದೆ. ಮಂಗಳವಾರದಿಂದ ಫೆಬ್ರವರಿ 8 ರ ವರೆಗೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ರ್ಯಾಲಿ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ