ಹಸುಗೂಸು ಸೇರಿ ಮೂವರು ಮಕ್ಕಳನ್ನು ನದಿಗೆ ಎಸೆದು ಕೊಂದ ಅಪ್ಪ!
Team Udayavani, Aug 6, 2018, 4:51 PM IST
ಹೈದರಾಬಾದ್: ಹೆಂಡತಿ ಮೇಲಿನ ಕೋಪಕ್ಕೆ ಕಟುಕ ಪತಿ 3 ತಿಂಗಳ ಹಸುಗೂಸು ಸೇರಿದಂತೆ ಮೂವರು ಮಕ್ಕಳನ್ನು ನದಿಗೆ ಎಸೆದು ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.
ಮನೆಯ ಸಮೀಪದ ಹೊಳೆಯಲ್ಲಿ ಆರು ವರ್ಷದ, ಮೂರು ವರ್ಷದ ಹಾಗೂ 3 ತಿಂಗಳ ಮಗುವಿನ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯ ಜನರು ಆಘಾತಕ್ಕೊಳಗಾಗಿದ್ದರು. ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಮೂರು ದೇಹಗಳನ್ನು ನದಿಯಿಂದ ಹೊರತೆಗೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ವೆಂಕಟೇಶ್ ಹಾಗೂ ಅಮರಾವತಿ ದಂಪತಿಗೆ ಪುನೀತ್ (6ವರ್ಷ), ಸಂಜಯ್(3ವರ್ಷ) ಹಾಗೂ ರಾಹುಲ್(3 ತಿಂಗಳ ಮಗು) ಮೂವರು ಮಕ್ಕಳು.
ಮೊದಲ ಹೆಂಡತಿಗೆ ಮಕ್ಕಳಾಗಲಿಲ್ಲ ಎಂದು ವೆಂಕಟೇಶ್ ಅಮರಾವತಿಯನ್ನು ವಿವಾಹವಾಗಿದ್ದ. ಕಳೆದ ವಾರ ಅಮರಾವತಿ ಪತಿ ಜೊತೆ ಜಗಳವಾಡಿಕೊಂಡು ಮೂವರು ಮಕ್ಕಳೊಂದಿಗೆ ತನ್ನ ತಾಯಿ ಮನೆಗೆ ಹೋಗಿದ್ದಳು. ತದನಂತರ ವೆಂಕಟೇಶ್ ಪತ್ನಿ ಮತ್ತು ಮಕ್ಕಳನ್ನು ವಾಪಸ್ ಕರೆತರುತ್ತಿದ್ದಾಗ ದಾರಿ ಮಧ್ಯೆ ಇಬ್ಬರ ನಡುವೆ ಮತ್ತೆ ಜಗಳ ಪ್ರಾರಂಭವಾಗಿತ್ತು. ಆಗ ವೆಂಕಟೇಶ್ ಆವೇಶಭರಿತನಾಗಿ ಮೂವರು ಮಕ್ಕಳನ್ನು ಹೊಳೆಗೆ ಎಸೆದು ಬಿಟ್ಟಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತನ್ನ ಸ್ವಂತ ಮಕ್ಕಳನ್ನೇ ಕಟುಕನಂತೆ ವರ್ತಿಸಿ ಕೊಲ್ಲುತ್ತಾನೆಂದು ಊಹಿಸಿಯೇ ಇರಲಿಲ್ಲ ತಾನು ಎಂದು ಅಮರಾವತಿ ಪೊಲೀಸರ ಬಳಿ ಅಲವತ್ತುಕೊಂಡಿದ್ದಾಳೆ. ಇದೀಗ ಮೂವರು ಮಕ್ಕಳನ್ನು ಕೊಂದ ಕಿರಾತಕ ಪತಿ ಕಂಬಿ ಎಣಿಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?